ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದ ಬಳಿಕ ಮಧ್ಯಪ್ರದೇಶ ಕಾಂಗ್ರೆಸ್ನಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿತ್ತು. 22 ಬಂಡಾಯ ಶಾಸಕರು ರಾಜೀನಾಮೆ ನೀಡಿದ್ದರು. ಈ ಪೈಕಿ 6 ಶಾಸಕರ ರಾಜೀನಾಮೆ ಅಂಗೀಕಾರವಾಗಿದ್ದು, ಉಳಿದವರದ್ದು ಇತ್ಯರ್ಥವಾಗದೆ ಉಳಿದುಕೊಂಡಿತ್ತು. ಶುಕ್ರವಾರ 16 ಶಾಸಕರ ರಾಜೀನಾಮೆಯನ್ನುವಿಧಾನಸಭೆ ಸ್ಪೀಕರ್ ಎನ್.ಪಿ. ಪ್ರಜಾಪತಿ ಅಂಗೀಕರಿಸಿದ್ದರು.