<p><strong>ಭೋಪಾಲ್: </strong>ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿಯಾಗಿ ಚೌಹಾಣ್ ಅವರಿಗೆ ಇದು ನಾಲ್ಕನೇ ಅವಧಿ.</p>.<p>ಕಮಲನಾಥ್ ನೇತೃತ್ವದ 15 ತಿಂಗಳ ಅವಧಿಯ ಸರ್ಕಾರವನ್ನು ಪತನಗೊಳಿಸಿದ ಕೆಲವೇ ದಿನಗಳಲ್ಲಿ, ಬಿಜೆಪಿ ಸರ್ಕಾರ ರಚಿಸಿದೆ.</p>.<p>ಮಧ್ಯಪ್ರದೇಶ ಕಾಂಗ್ರೆಸ್ನ ಪ್ರಭಾವಿ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು 22 ಶಾಸಕರು ರಾಜೀನಾಮೆ ನೀಡಿದ ಕಾರಣ, ಕಾಂಗ್ರೆಸ್ ಸರ್ಕಾರವು ಬಹುಮತ ಕಳೆದುಕೊಂಡಿತ್ತು. ಈ ಶಾಸಕರು ಬೆಂಗಳೂರಿನ ಹೋಟೆಲ್ ಒಂದರಲ್ಲಿ ಉಳಿದುಕೊಂಡು, ಅಲ್ಲಿಂದಲೇ ರಾಜೀನಾಮೆ ಸಲ್ಲಿಸಿದ್ದರು.</p>.<p>ಮಧ್ಯಪ್ರದೇಶ ರಾಜ್ಯಪಾಲರು, ಮಾರ್ಚ್ 17ರಂದು ಬಹುಮತ ಸಾಬೀತು ಮಾಡುವಂತೆ ಕಮಲನಾಥ್ ಅವರಿಗೆ ಸೂಚಿಸಿದ್ದರು. ಆದರೆ, ಕೊರೊನಾವೈರಸ್ ಕಾರಣ ಸ್ಪೀಕರ್ ಅವರು ಸದನವನ್ನು ಮುಂದೂಡಿದ್ದರು. ಇದರ ವಿರುದ್ಧ ಬಿಜೆಪಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.</p>.<p>ಮಾರ್ಚ್ 19ರ ಸಂಜೆ 5ರ ಒಳಗೆ ಬಹುಮತ ಸಾಬೀತು ಮಾಡಿ ಎಂದು ಕಮಲನಾಥ್ ಅವರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಈ ಗಡುವು ಮುಗಿಯುವ ಮುನ್ನವೇ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.</p>.<p>ಕಾಂಗ್ರೆಸ್ಗೆ ತೊರೆದಿದ್ದ 22 ಶಾಸಕರು ನಂತರದ ದಿನಗಳಲ್ಲಿ ಬಿಜೆಪಿ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್: </strong>ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿಯಾಗಿ ಚೌಹಾಣ್ ಅವರಿಗೆ ಇದು ನಾಲ್ಕನೇ ಅವಧಿ.</p>.<p>ಕಮಲನಾಥ್ ನೇತೃತ್ವದ 15 ತಿಂಗಳ ಅವಧಿಯ ಸರ್ಕಾರವನ್ನು ಪತನಗೊಳಿಸಿದ ಕೆಲವೇ ದಿನಗಳಲ್ಲಿ, ಬಿಜೆಪಿ ಸರ್ಕಾರ ರಚಿಸಿದೆ.</p>.<p>ಮಧ್ಯಪ್ರದೇಶ ಕಾಂಗ್ರೆಸ್ನ ಪ್ರಭಾವಿ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು 22 ಶಾಸಕರು ರಾಜೀನಾಮೆ ನೀಡಿದ ಕಾರಣ, ಕಾಂಗ್ರೆಸ್ ಸರ್ಕಾರವು ಬಹುಮತ ಕಳೆದುಕೊಂಡಿತ್ತು. ಈ ಶಾಸಕರು ಬೆಂಗಳೂರಿನ ಹೋಟೆಲ್ ಒಂದರಲ್ಲಿ ಉಳಿದುಕೊಂಡು, ಅಲ್ಲಿಂದಲೇ ರಾಜೀನಾಮೆ ಸಲ್ಲಿಸಿದ್ದರು.</p>.<p>ಮಧ್ಯಪ್ರದೇಶ ರಾಜ್ಯಪಾಲರು, ಮಾರ್ಚ್ 17ರಂದು ಬಹುಮತ ಸಾಬೀತು ಮಾಡುವಂತೆ ಕಮಲನಾಥ್ ಅವರಿಗೆ ಸೂಚಿಸಿದ್ದರು. ಆದರೆ, ಕೊರೊನಾವೈರಸ್ ಕಾರಣ ಸ್ಪೀಕರ್ ಅವರು ಸದನವನ್ನು ಮುಂದೂಡಿದ್ದರು. ಇದರ ವಿರುದ್ಧ ಬಿಜೆಪಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.</p>.<p>ಮಾರ್ಚ್ 19ರ ಸಂಜೆ 5ರ ಒಳಗೆ ಬಹುಮತ ಸಾಬೀತು ಮಾಡಿ ಎಂದು ಕಮಲನಾಥ್ ಅವರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಈ ಗಡುವು ಮುಗಿಯುವ ಮುನ್ನವೇ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.</p>.<p>ಕಾಂಗ್ರೆಸ್ಗೆ ತೊರೆದಿದ್ದ 22 ಶಾಸಕರು ನಂತರದ ದಿನಗಳಲ್ಲಿ ಬಿಜೆಪಿ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>