<p><strong>ಕೋಲ್ಕತ್ತ: </strong>ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಹೆಲಿಕಾಪ್ಟರ್ ಇಳಿಯಲು ಜಿಲ್ಲಾಡಳಿತ ಅವಕಾಶ ನೀಡದ ಕಾರಣ ಮುರ್ಷಿದಾಬಾದ್ ರ್ಯಾಲಿ ರದ್ದುಗೊಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಘಟಕ ಬುಧವಾರ ತಿಳಿಸಿದೆ.</p>.<p>ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಖರಗ್ಪುರ ಹಾಗೂ ಮುರ್ಷಿದಾಬಾದ್ ಜಿಲ್ಲೆ ಬಹರಾಮ್ಪುರದಲ್ಲಿ ಆಯೋಜಿಸಿದ್ದ ರ್ಯಾಲಿಗಳಲ್ಲಿ ಚೌಹಾಣ್ ಅವರು ಭಾಗಿಯಾಗಬೇಕಿತ್ತು. ಬಹರಾಮ್ಪುರದಲ್ಲಿ ಕಾಪ್ಟರ್ ಇಳಿಯಲು ಅವಕಾಶ ನೀಡದ ಕಾರಣ ಅವರು ರಸ್ತೆ ಮೂಲಕ ಪ್ರಯಾಣಿಸಿ, ಖರಗ್ಪುರ ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯಂತನು ಬಸು ಹೇಳಿದ್ದಾರೆ.</p>.<p>‘ಬಿಜೆಪಿ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರವು ರಾಜಕೀಯ ಮಾಡುತ್ತಿದೆ. ಯೋಗಿ ಆದಿತ್ಯನಾಥ, ಸ್ಮೃತಿ ಇರಾನಿ ಅವರ ಕಾಪ್ಟರ್ಗೂ ಅವಕಾಶ ನೀಡಿರಲಿಲ್ಲ. ಇದು ಹೊಸದೇನೂ ಅಲ್ಲ. ನಮ್ಮ ದಾರಿಯಲ್ಲಿ ನಾವೂ ಹೋರಾಟ ಮಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಹೆಲಿಕಾಪ್ಟರ್ ಇಳಿಯಲು ಜಿಲ್ಲಾಡಳಿತ ಅವಕಾಶ ನೀಡದ ಕಾರಣ ಮುರ್ಷಿದಾಬಾದ್ ರ್ಯಾಲಿ ರದ್ದುಗೊಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಘಟಕ ಬುಧವಾರ ತಿಳಿಸಿದೆ.</p>.<p>ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಖರಗ್ಪುರ ಹಾಗೂ ಮುರ್ಷಿದಾಬಾದ್ ಜಿಲ್ಲೆ ಬಹರಾಮ್ಪುರದಲ್ಲಿ ಆಯೋಜಿಸಿದ್ದ ರ್ಯಾಲಿಗಳಲ್ಲಿ ಚೌಹಾಣ್ ಅವರು ಭಾಗಿಯಾಗಬೇಕಿತ್ತು. ಬಹರಾಮ್ಪುರದಲ್ಲಿ ಕಾಪ್ಟರ್ ಇಳಿಯಲು ಅವಕಾಶ ನೀಡದ ಕಾರಣ ಅವರು ರಸ್ತೆ ಮೂಲಕ ಪ್ರಯಾಣಿಸಿ, ಖರಗ್ಪುರ ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯಂತನು ಬಸು ಹೇಳಿದ್ದಾರೆ.</p>.<p>‘ಬಿಜೆಪಿ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರವು ರಾಜಕೀಯ ಮಾಡುತ್ತಿದೆ. ಯೋಗಿ ಆದಿತ್ಯನಾಥ, ಸ್ಮೃತಿ ಇರಾನಿ ಅವರ ಕಾಪ್ಟರ್ಗೂ ಅವಕಾಶ ನೀಡಿರಲಿಲ್ಲ. ಇದು ಹೊಸದೇನೂ ಅಲ್ಲ. ನಮ್ಮ ದಾರಿಯಲ್ಲಿ ನಾವೂ ಹೋರಾಟ ಮಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>