ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಖರಗ್ಪುರ ಹಾಗೂ ಮುರ್ಷಿದಾಬಾದ್ ಜಿಲ್ಲೆ ಬಹರಾಮ್ಪುರದಲ್ಲಿ ಆಯೋಜಿಸಿದ್ದ ರ್ಯಾಲಿಗಳಲ್ಲಿ ಚೌಹಾಣ್ ಅವರು ಭಾಗಿಯಾಗಬೇಕಿತ್ತು. ಬಹರಾಮ್ಪುರದಲ್ಲಿ ಕಾಪ್ಟರ್ ಇಳಿಯಲು ಅವಕಾಶ ನೀಡದ ಕಾರಣ ಅವರು ರಸ್ತೆ ಮೂಲಕ ಪ್ರಯಾಣಿಸಿ, ಖರಗ್ಪುರ ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯಂತನು ಬಸು ಹೇಳಿದ್ದಾರೆ.