ಪುರ ಸಮೀಪದ ಯವತಮಲ್ ಎಂಬಲ್ಲಿ ಈ ಘಟನೆ ನಡೆದಿದೆ. ಬುಧವಾರ ಬೆಳಿಗ್ಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರಾಷ್ಟ್ರೀಯ ನಾಗರಿಕ ನೋಂದಣಿ (ಎನ್ಆರ್ಸಿ) ನೀತಿಗಳನ್ನು ವಿರೋಧಿಸಿ ಮಹಾರಾಷ್ಟ್ರದಲ್ಲಿ ವಿವಿಧ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದವು. ಈ ಸಂದರ್ಭದಲ್ಲಿ ಕೆಲವು ವರ್ತಕರು ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಬಂದ್ ಮಾಡಿದ್ದರು. ಕೆಲವರು ಬಾಗಿಲು ತೆರೆದು ವ್ಯಾಪಾರ ಮಾಡುತ್ತಿದ್ದರು. ಇದು ಸಂಘಟನೆಗಳ ಕಾರ್ಯಕರ್ತರ ಕಣ್ಣಿಗೆ ಬಿದ್ದಿತು. ಕೂಡಲೆ ಅವರು ಅಂಗಡಿ ಮಾಲೀಕರ ಬಳಿ ಹೋಗಿ ಬಾಗಿಲು ಮುಚ್ಚುವಂತೆ ಹೇಳಿದರು. ಆದರೆ, ಮಾಲೀಕ ಬಾಗಿಲು ಮುಚ್ಚಲಿಲ್ಲ. ಆ ಸಮಯದಲ್ಲಿ ಕಾರ್ಯಕರ್ತರು ಹಾಗೂ ಅಂಗಡಿ ಮಾಲೀಕನ ನಡುವೆ ಮಾತಿನ ಚಕಮಕಿ ನಡೆದಿದೆ.