ಎಎಪಿ ಶಾಸಕ ನರೇಶ್ ಯಾದವ್ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ, ಓರ್ವ ಸಾವು

ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಭ್ರಮಾಚರಣೆ ಮಾಡುತ್ತಿರುವ ಹೊತ್ತಿನಲ್ಲೇ ಪಕ್ಷದ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದಾರೆ.
ಮಹರೌಲಿ ಶಾಸಕ ನರೇಶ್ ಯಾದವ್ ಮತ್ತು ಆತನ ಬೆಂಬಲಿಗರು ತಮ್ಮ ಚುನಾವಣಾ ಕ್ಷೇತ್ರದಲ್ಲಿರುವ ದೇವಾಲಯಕ್ಕೆ ಹೋಗಿ ಪ್ರಾರ್ಥಿಸಿ ಹಿಂತಿರುಗುತ್ತಿದ್ದರು. ನೈಋತ್ಯ ದೆಹಲಿಯ ಕೃಷ್ಣಾಗಡ್ ಗ್ರಾಮದಲ್ಲಿ ಇವರು ಸಂಚರಿಸುತ್ತಿದ್ದ ವಾಹನದ ಮೇಲೆ ದುಷ್ಕರ್ಮಿಗಳು ಏಳು ಸುತ್ತು ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಓರ್ವ ಸಾವಿಗೀಡಾಗಿದ್ದು, ಇನ್ನೊಬ್ಬರಿಗೆ ಗಾಯಗಳಾಗಿವೆ. ಗಾಯಗೊಂಡ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ ಪೊಲೀಸರು.
Delhi: Delhi: Shots fired at the convoy of Naresh Yadav, Aam Aadmi Party (AAP) MLA from Mehrauli on Aruna Asaf Ali Marg, last night. One party volunteer lost his life while another has been injured in the incident. pic.twitter.com/UREQkDVEkB
— ANI (@ANI) February 11, 2020
Naresh Yadav, AAP MLA: The incident is really unfortunate. I don't know the reason behind the attack but it happened all of a sudden. Around 4 rounds were fired. The vehicle I was in was attacked. I am sure if Police inquires properly they will be able to identify the assailant. https://t.co/M5mpJm7ljp pic.twitter.com/kzwbql6lmP
— ANI (@ANI) February 11, 2020
ಗುಂಡಿನ ದಾಳಿಯಲ್ಲಿ ಪಕ್ಷದ ಕಾರ್ಯಕರ್ತ ಅಶೋಕ್ ಮನ್ ಎಂಬವರು ಸಾವಿಗೀಡಾಗಿದ್ದಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಟ್ವೀಟಿಸಿದ್ದಾರೆ.
ಮಹರೌಲಿಯಲ್ಲಿ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯಲ್ಲಿ ಅಶೋಕ್ ಮನ್ ಹತ್ಯೆಯಾಗಿದ್ದಾರೆ. ನರೇಶ್ ಯಾದವ್ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದರು ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.
मेहरौली विधायक नरेश यादव के क़ाफ़िले पर हमला अशोक मान की सरेआम हत्या ये है दिल्ली में क़ानून का राज, मंदिर से दर्शन करके लौट रहे थे नरेश यादव
— Sanjay Singh AAP (@SanjayAzadSln) February 11, 2020
ಎಎಪಿ ಶಾಸಕ ಮತ್ತು ಕಾರ್ಯಕರ್ತರು ದೇವಸ್ಥಾನಕ್ಕೆ ಹೋಗಿ ಹಿಂತಿರುತ್ತಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಒಬ್ಬ ವ್ಯಕ್ತಿ ಗುಂಡಿಗೆ ಬಲಿಯಾಗಿದ್ದು ಇನ್ನೊಬ್ಬ ವ್ಯಕ್ತಿಗೆ ಗಾಯಗಳಾಗಿವೆ ಎಂದು ಎಎಪಿ ಟ್ವೀಟಿಸಿದೆ.
Volunteer Ashok Mann has passed away in the attack at AAP MLA @MLA_NareshYadav
Today we have lost one of our family member. May his soul rest in peace.
— AAP (@AamAadmiParty) February 11, 2020
Update about firing on @MLA_NareshYadav
काफ़िले पर पीछे से हमला हुआ था। 2 साथियों को गोली लगी।
इस हमले में अशोक मान जी की मौत हो गयी, हरेंद्र जी घायल है। हरेंद्र जी के पैर में गोली लगी है और वो Fortis हॉस्पिटल में भर्ती हैं। उनकी हालत ख़तरे से बाहर है।
— Ankit Lal (@AnkitLal) February 11, 2020
अशोक मान जिसकी गोली लगने से मौत है, अभी किसी ने हॉस्पिटल में उसका फ़ोटो दिखाया, बहुत ही यंग लड़का था, आम आदमी पार्टी का supporter था, उसकी उम्र 25 साल से ज्यादा नही होगी।
बहुत दुःखद 😔😔😔 https://t.co/fpnvvNpHPF— Vivek Gupta (@30guptavivek) February 11, 2020
ಎಎಪಿ ಶಾಸಕ ನರೇಶ್ ಯಾದವ್ ಮತ್ತು ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿ ದೇವಸ್ಥಾನಕ್ಕೆ ಹೋಗಿ ಮರಳುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ಅಶೋಕ್ ಮನ್ ಎಂಬ ಕಾರ್ಯಕರ್ತ ಸಾವಿಗೀಡಾಗಿದ್ದು, ಹರೇಂದ್ರ ಅವರಿಗೆ ಗಾಯವಾಗಿದೆ. ಅವರನ್ನು ಫೋರ್ಟೀಸ್ ಆಸ್ಪತ್ರೆಗೆ ದಾಖಲಿಸಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಸಾಮಾಜಿಕ ಮಾಧ್ಯಮದ ಉಸ್ತುವಾರಿ ಅಂಕಿತ್ ಲಾಲ್ ಟ್ವೀಟ್ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.