<p><strong>ನವದೆಹಲಿ:</strong>ವಿಶ್ವದ ಯಾವುದೇ ದೇಶದಲ್ಲಿ ಕೇಳದಂತಹ ವಿಷಯಗಳು ಭಾರತದ ಸಾರ್ವತ್ರಿಕ ಚುನಾವಣಾ ವೇಳೆ ಚರ್ಚೆಗೆ ಬರುತ್ತವೆ ಎಂದು ಆರ್ಥಿಕ ತಜ್ಞ, ನೋಬೆಲ್ ಪುರಸ್ಕೃತ ಅಮರ್ತ್ಯ ಸೇನ್ ಹೇಳಿದ್ದಾರೆ.</p>.<p>ರಾಮ ಮಂದಿರ ನಿರ್ಮಾಣ ಮತ್ತು ಶಬರಿಮಲೆ ವಿಷಯಗಳು ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಈ ಹೊತ್ತಿನಲ್ಲಿ ಅಮರ್ತ್ಯ ಸೇನ್ ಅವರು ತಮ್ಮ ಅಭಿಪ್ರಾಯ ಹೇಳಿಕೊಂಡಿದ್ದಾರೆ.</p>.<p>’ಉದಾಹರಣೆಗೆ, ರಾಮಮಂದಿರ ನಿರ್ಮಿಸಬೇಕೇ ಮತ್ತು ಋತುಮತಿಯರಾದ ಮಹಿಳೆ ದೇಗುಲ ಪ್ರವೇಶ ಮಾಡಬೇಕೇ ಬೇಡವೇ? ವಿಷಯಗಳು ಚರ್ಚೆಯಾಗುತ್ತವೆ. ಚುನಾವಣಾ ವರ್ಷದಲ್ಲಿ ಇವೇನು ಗಂಭೀರ ವಿಷಯವೇ?‘ ಎಂದು ಹೇಳಿದ್ದಾರೆ.</p>.<p>‘ಅದನ್ನು ಜನರು ಸ್ವೀಕರಿಸುವುದಿಲ್ಲ ಮತ್ತು ಜನರಿಗೆ ಕಿರುಕುಳ ನೀಡುವುದು ಸ್ವೀಕಾರಾರ್ಹವಲ್ಲ. ರಾಷ್ಟ್ರದಲ್ಲಿನ ಪ್ರಸ್ತುತ ಪರಿಸ್ಥಿತಿ ಬದಲಾಗಬೇಕು’ ಎಂದು ಅವರು ಹೇಳಿದ್ದಾರೆ.</p>.<p>‘ದೇಶದ ಹಲವು ವಿಶ್ವವಿದ್ಯಾಲಯಗಳು ಸ್ವಾತಂತ್ರ್ಯ ಮತ್ತು ಸ್ವಾಯತ್ತತೆ ವಿಷಯವಾಗಿ ನರಳುತ್ತಿವೆ. ಇತರ ಸಂಸ್ಥೆಗಳೂ ಸಹ ಇದರಿಂದ ಹೊರತಾಗಿಲ್ಲ ಎಂದಿದ್ದಾರೆ.</p>.<p>ಸಾರ್ವತ್ರಿಕ ಚುನಾವಣೆ ಎದುರು ನೋಡುತ್ತಿರುವ ಸಂದರ್ಭದಲ್ಲಿಸೇನ್, ‘ಪತ್ರಕರ್ತರು ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಅದು ಸ್ವೀಕಾರಾರ್ಹವಲ್ಲ. ಚುನಾವಣೆ ಸಮೀಪಿಸುತ್ತಿದೆ, ಏನಾಗುತ್ತದೆ ನೋಡೋಣ’ ಎಂದಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ವಿಶ್ವದ ಯಾವುದೇ ದೇಶದಲ್ಲಿ ಕೇಳದಂತಹ ವಿಷಯಗಳು ಭಾರತದ ಸಾರ್ವತ್ರಿಕ ಚುನಾವಣಾ ವೇಳೆ ಚರ್ಚೆಗೆ ಬರುತ್ತವೆ ಎಂದು ಆರ್ಥಿಕ ತಜ್ಞ, ನೋಬೆಲ್ ಪುರಸ್ಕೃತ ಅಮರ್ತ್ಯ ಸೇನ್ ಹೇಳಿದ್ದಾರೆ.</p>.<p>ರಾಮ ಮಂದಿರ ನಿರ್ಮಾಣ ಮತ್ತು ಶಬರಿಮಲೆ ವಿಷಯಗಳು ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಈ ಹೊತ್ತಿನಲ್ಲಿ ಅಮರ್ತ್ಯ ಸೇನ್ ಅವರು ತಮ್ಮ ಅಭಿಪ್ರಾಯ ಹೇಳಿಕೊಂಡಿದ್ದಾರೆ.</p>.<p>’ಉದಾಹರಣೆಗೆ, ರಾಮಮಂದಿರ ನಿರ್ಮಿಸಬೇಕೇ ಮತ್ತು ಋತುಮತಿಯರಾದ ಮಹಿಳೆ ದೇಗುಲ ಪ್ರವೇಶ ಮಾಡಬೇಕೇ ಬೇಡವೇ? ವಿಷಯಗಳು ಚರ್ಚೆಯಾಗುತ್ತವೆ. ಚುನಾವಣಾ ವರ್ಷದಲ್ಲಿ ಇವೇನು ಗಂಭೀರ ವಿಷಯವೇ?‘ ಎಂದು ಹೇಳಿದ್ದಾರೆ.</p>.<p>‘ಅದನ್ನು ಜನರು ಸ್ವೀಕರಿಸುವುದಿಲ್ಲ ಮತ್ತು ಜನರಿಗೆ ಕಿರುಕುಳ ನೀಡುವುದು ಸ್ವೀಕಾರಾರ್ಹವಲ್ಲ. ರಾಷ್ಟ್ರದಲ್ಲಿನ ಪ್ರಸ್ತುತ ಪರಿಸ್ಥಿತಿ ಬದಲಾಗಬೇಕು’ ಎಂದು ಅವರು ಹೇಳಿದ್ದಾರೆ.</p>.<p>‘ದೇಶದ ಹಲವು ವಿಶ್ವವಿದ್ಯಾಲಯಗಳು ಸ್ವಾತಂತ್ರ್ಯ ಮತ್ತು ಸ್ವಾಯತ್ತತೆ ವಿಷಯವಾಗಿ ನರಳುತ್ತಿವೆ. ಇತರ ಸಂಸ್ಥೆಗಳೂ ಸಹ ಇದರಿಂದ ಹೊರತಾಗಿಲ್ಲ ಎಂದಿದ್ದಾರೆ.</p>.<p>ಸಾರ್ವತ್ರಿಕ ಚುನಾವಣೆ ಎದುರು ನೋಡುತ್ತಿರುವ ಸಂದರ್ಭದಲ್ಲಿಸೇನ್, ‘ಪತ್ರಕರ್ತರು ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಅದು ಸ್ವೀಕಾರಾರ್ಹವಲ್ಲ. ಚುನಾವಣೆ ಸಮೀಪಿಸುತ್ತಿದೆ, ಏನಾಗುತ್ತದೆ ನೋಡೋಣ’ ಎಂದಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>