<p><strong>ನವದೆಹಲಿ</strong>:‘ಶ್ರಮಿಕ್ ವಿಶೇಷ ರೈಲಿನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ’ ಎಂದುಅಖಿಲ ಭಾರತ ರೈಲ್ವೆ ನೌಕರರ ಒಕ್ಕೂಟ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಗುರುವಾರ ಮನವಿ ಮಾಡಿದೆ.</p>.<p>ಈ ಸಂಬಂಧ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಒಕ್ಕೂಟ, ‘ನಿಲ್ದಾಣಗಳಲ್ಲಿ ಜನದಟ್ಟಣೆಯ ನಿಯಂತ್ರಣಕ್ಕಾಗಿ ರೈಲ್ವೆ ಶುಲ್ಕ ವಿಧಿಸುತ್ತಿದೆ’ ಎಂದು ಸ್ಪಷ್ಟಪಡಿಸಿದೆ.</p>.<p>‘ವಲಸಿಗರನ್ನು ಅವರ ತವರೂರಿಗೆ ಮರಳಲು ಅನುವು ಮಾಡಿಕೊಟ್ಟ ಉತ್ತಮ ವ್ಯವಸ್ಥೆಯನ್ನು ಅಲ್ಪಾವಧಿಯ ರಾಜಕೀಯ ಲಾಭಕ್ಕಾಗಿ ಅಸ್ಥಿರಗೊಳಿಸಲು ಪ್ರಯತ್ನಿಸಬೇಡಿ ಎಂದು ವಿನಂತಿಸುತ್ತೇನೆ’ ಎಂದು ಒಕ್ಕೂಟದಪ್ರಧಾನ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ಹೇಳಿದ್ದಾರೆ.</p>.<p>‘ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಪ್ರಯಾಣಿಸುವುದು ಅಪಾಯಕಾರಿ. ಆದರೆ, ಸಿಬ್ಬಂದಿ ತಮ್ಮ ಕಠಿಣ ಪರಿಶ್ರಮದ ಮೂಲಕ ಅದನ್ನು ಸಾಧ್ಯವಾಗಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.</p>.<p>ವಲಸೆ ಕಾರ್ಮಿಕರಿಗೆ ರೈಲು ಟಿಕೆಟ್ ಶುಲ್ಕ ವಿಧಿಸಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕಿಡಿಕಾರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:‘ಶ್ರಮಿಕ್ ವಿಶೇಷ ರೈಲಿನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ’ ಎಂದುಅಖಿಲ ಭಾರತ ರೈಲ್ವೆ ನೌಕರರ ಒಕ್ಕೂಟ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಗುರುವಾರ ಮನವಿ ಮಾಡಿದೆ.</p>.<p>ಈ ಸಂಬಂಧ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಒಕ್ಕೂಟ, ‘ನಿಲ್ದಾಣಗಳಲ್ಲಿ ಜನದಟ್ಟಣೆಯ ನಿಯಂತ್ರಣಕ್ಕಾಗಿ ರೈಲ್ವೆ ಶುಲ್ಕ ವಿಧಿಸುತ್ತಿದೆ’ ಎಂದು ಸ್ಪಷ್ಟಪಡಿಸಿದೆ.</p>.<p>‘ವಲಸಿಗರನ್ನು ಅವರ ತವರೂರಿಗೆ ಮರಳಲು ಅನುವು ಮಾಡಿಕೊಟ್ಟ ಉತ್ತಮ ವ್ಯವಸ್ಥೆಯನ್ನು ಅಲ್ಪಾವಧಿಯ ರಾಜಕೀಯ ಲಾಭಕ್ಕಾಗಿ ಅಸ್ಥಿರಗೊಳಿಸಲು ಪ್ರಯತ್ನಿಸಬೇಡಿ ಎಂದು ವಿನಂತಿಸುತ್ತೇನೆ’ ಎಂದು ಒಕ್ಕೂಟದಪ್ರಧಾನ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ಹೇಳಿದ್ದಾರೆ.</p>.<p>‘ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಪ್ರಯಾಣಿಸುವುದು ಅಪಾಯಕಾರಿ. ಆದರೆ, ಸಿಬ್ಬಂದಿ ತಮ್ಮ ಕಠಿಣ ಪರಿಶ್ರಮದ ಮೂಲಕ ಅದನ್ನು ಸಾಧ್ಯವಾಗಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.</p>.<p>ವಲಸೆ ಕಾರ್ಮಿಕರಿಗೆ ರೈಲು ಟಿಕೆಟ್ ಶುಲ್ಕ ವಿಧಿಸಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕಿಡಿಕಾರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>