ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ ಭೇಟಿ: ಸೀತಾರಾಂ ಯೆಚೂರಿಗೆ ಸುಪ್ರೀಂ ಅನುಮತಿ

Last Updated 28 ಆಗಸ್ಟ್ 2019, 9:03 IST
ಅಕ್ಷರ ಗಾತ್ರ

ನವದೆಹಲಿ:ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ 370ನೇ ವಿಧಿ ರದ್ದತಿ ಬಳಿಕ ಸಿಪಿಐ (ಎಂ) ಪಕ್ಷದ ನಾಯಕ ಸೀತಾರಾಂ ಯೆಚೂರಿ ಅವರ ಕಾಶ್ಮೀರ ಭೇಟಿಗೆ ಸುಪ್ರೀಂ ಕೋರ್ಟ್‌ ಬುಧವಾರ ಅನುಮತಿ ನೀಡಿದೆ.

ತಮ್ಮ ಪಕ್ಷದ ಸಹದ್ಯೋಗಿ ಹಾಗೂ ಮಾಜಿ ಶಾಸಕ ಮೊಹಮ್ಮದ್‌ ಯೂಸಪ್ ತಾರಿಗಾಮಿಅನಾರೋಗ್ಯದಿಂದ ಬಳಲುತ್ತಿದ್ದು ಅವರಭೇಟಿಗಾಗಿತಮಗೆ ಕಾಶ್ಮೀರಕ್ಕೆ ತೆರಳಲು ಅವಕಾಶ ನೀಡಬೇಕು ಎಂದುಸೀತಾರಾಂ ಯೆಚೂರಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅವರ ಮನವಿಯನ್ನು ಪುರಸ್ಕರಿಸಿರುವ ನ್ಯಾಯಪೀಠ ಕಾಶ್ಮೀರಕ್ಕೆ ತೆರಳಲು ಅವಕಾಶ ನೀಡಿದೆ.

ಈ ಭೇಟಿಯನ್ನು ಯಾವುದೇ ರಾಜಕೀಯ ಉದ್ದೇಶಕ್ಕೆ ಬಳಸದಿರುವಂತೆ ಸೀತಾರಾಂ ಯೆಚೂರಿ ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ನೀವು ಅಲ್ಲಿ ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆಸಿದರೆ ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಲು ಮುಕ್ತರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಸೀತಾರಾಂ ಯೆಚೂರಿ ಈ ಹಿಂದೆ ಎರಡು ಬಾರಿ ಕಾಶ್ಮೀರಕ್ಕೆ ತೆರಳಲು ಪ್ರಯತ್ನಿಸಿದ್ದರು. ಆದರೆ ಅಲ್ಲಿಗೆ ಹೋಗಲು ಸಾಧ್ಯವಾಗಿರಲಿಲ್ಲ.

ಕಾಶ್ಮೀರದ ವಿದ್ಯಾರ್ಥಿ ಅಲೀಂ ಸಹೀದ್‌ ಅವರಿಗೂ ತಮ್ಮ ಪೋಷಕರನ್ನು ಭೇಟಿ ಮಾಡಲು ಸುಪ್ರೀಂ ಕೋರ್ಟ್‌ ಅನುಮತಿ ನೀಡಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT