<p><strong>ಶ್ರೀನಗರ:</strong> ಕಾಶ್ಮೀರದ ಎಲ್ಲ ಮೊಬೈಲ್ಗಳಿಗೆ ಎಸ್ಎಂಎಸ್ ಸೇವೆ ಮತ್ತು ಸರ್ಕಾರ ಆಸ್ಪತ್ರೆಗಳಿಗೆ ಬ್ರಾಡ್ಬ್ಯಾಂಡ್ ಸೇವೆಯನ್ನು ಮಂಗಳವಾರ ಮಧ್ಯರಾತ್ರಿಯಿಂದ ಮರುಸ್ಥಾಪಿಸಲಾಗಿದೆ. ಕೇಂದ್ರ ಸರ್ಕಾರ ಕಣಿವೆ ರಾಜ್ಯದ ಮೇಲೆ ನಿರ್ಬಂಧ ವಿಧಿಸಿದ್ದ150 ದಿನಗಳ ನಂತರ ಎಸ್ಎಂಎಸ್ ಸೇವೆ ಇಲ್ಲಿನ ಜನರಿಗೆ ಲಭ್ಯವಾಗುತ್ತಿದೆ.</p>.<p>ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದತಿ, ರಾಜ್ಯ ವಿಭಜನೆ ನಿರ್ಧಾರಕ್ಕೆ ಒಂದು ದಿನ ಮೊದಲು,ಆಗಸ್ಟ್ 4ರಿಂದ ಕೇಂದ್ರ ಸರ್ಕಾರವುಕಾಶ್ಮೀರದ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿತ್ತು.</p>.<p>ಕ್ರಮೇಣ ಸ್ಥಿರ ದೂರವಾಣಿ ಸಂಪರ್ಕ ಮರುಸ್ಥಾಪಿಸಲಾಯಿತು. ಆದರೆ ಇಂಟರ್ನೆಟ್ ಮತ್ತು ಪ್ರಿಪೇಯ್ಡ್ ಮೊಬೈಲ್ ಸೇವೆಗಳ ಮೇಲಿನ ನಿರ್ಬಂಧ ಮುಂದುವರಿದಿತ್ತು.</p>.<p>ರಾಜ್ಯದಲ್ಲಿ ಶಾಂತಿ ಸ್ಥಾಪನೆಗಾಗಿ ಮೊಬೈಲ್ ಇಂಟರ್ನೆಟ್ ಸೇವೆಯ ಮೇಲೆ ನಿರ್ಬಂಧ ಹೇರಲಾಗಿದೆ. ರಾಜ್ಯದ ವಿವಿಧೆಡೆ ಇರುವ ಸುಮಾರು 900 ಇಂಟರ್ನೆಟ್ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಅಗತ್ಯ ಸೇವೆ ನೀಡಲಾಗುತ್ತಿದೆ ಎಂದುಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಕಾಶ್ಮೀರದ ಎಲ್ಲ ಮೊಬೈಲ್ಗಳಿಗೆ ಎಸ್ಎಂಎಸ್ ಸೇವೆ ಮತ್ತು ಸರ್ಕಾರ ಆಸ್ಪತ್ರೆಗಳಿಗೆ ಬ್ರಾಡ್ಬ್ಯಾಂಡ್ ಸೇವೆಯನ್ನು ಮಂಗಳವಾರ ಮಧ್ಯರಾತ್ರಿಯಿಂದ ಮರುಸ್ಥಾಪಿಸಲಾಗಿದೆ. ಕೇಂದ್ರ ಸರ್ಕಾರ ಕಣಿವೆ ರಾಜ್ಯದ ಮೇಲೆ ನಿರ್ಬಂಧ ವಿಧಿಸಿದ್ದ150 ದಿನಗಳ ನಂತರ ಎಸ್ಎಂಎಸ್ ಸೇವೆ ಇಲ್ಲಿನ ಜನರಿಗೆ ಲಭ್ಯವಾಗುತ್ತಿದೆ.</p>.<p>ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದತಿ, ರಾಜ್ಯ ವಿಭಜನೆ ನಿರ್ಧಾರಕ್ಕೆ ಒಂದು ದಿನ ಮೊದಲು,ಆಗಸ್ಟ್ 4ರಿಂದ ಕೇಂದ್ರ ಸರ್ಕಾರವುಕಾಶ್ಮೀರದ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿತ್ತು.</p>.<p>ಕ್ರಮೇಣ ಸ್ಥಿರ ದೂರವಾಣಿ ಸಂಪರ್ಕ ಮರುಸ್ಥಾಪಿಸಲಾಯಿತು. ಆದರೆ ಇಂಟರ್ನೆಟ್ ಮತ್ತು ಪ್ರಿಪೇಯ್ಡ್ ಮೊಬೈಲ್ ಸೇವೆಗಳ ಮೇಲಿನ ನಿರ್ಬಂಧ ಮುಂದುವರಿದಿತ್ತು.</p>.<p>ರಾಜ್ಯದಲ್ಲಿ ಶಾಂತಿ ಸ್ಥಾಪನೆಗಾಗಿ ಮೊಬೈಲ್ ಇಂಟರ್ನೆಟ್ ಸೇವೆಯ ಮೇಲೆ ನಿರ್ಬಂಧ ಹೇರಲಾಗಿದೆ. ರಾಜ್ಯದ ವಿವಿಧೆಡೆ ಇರುವ ಸುಮಾರು 900 ಇಂಟರ್ನೆಟ್ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಅಗತ್ಯ ಸೇವೆ ನೀಡಲಾಗುತ್ತಿದೆ ಎಂದುಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>