ಸೊನಾಲಿಕಾ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ರಾಮನ್ ಮಿತ್ತಲ್ ಅವರು, ‘ಕೇರಳ ಪುನರ್ ನಿರ್ಮಾಣಕ್ಕೆ ಕೈಜೋಡಿಸಲು ಮತ್ತು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಬದ್ಧರಾಗಿದ್ದೇವೆ. ರಾಜ್ಯದಲ್ಲಿ ನಾಶವಾಗಿರುವ ಮೂಲಸೌಕರ್ಯ ಪುನರ್ ಸ್ಥಾಪಿಸಲು ಎಲ್ಲ ರೀತಿಯಲ್ಲೂ ಇನ್ನಷ್ಟು ನೆರವು ನೀಡಲಾಗುವುದು’ ಎಂದು ತಿಳಿಸಿದ್ದಾರೆ.