ಗುರ್ಜರ್ ಸಮುದಾಯದ ಮುಖಂಡ ಹಾಗೂ ಆತನ ಬೆಂಬಲಿಗರು ಗ್ರಾಮಸ್ಥರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಗೊಂಡ ಬುಡಕಟ್ಟು ಸಮುದಾಯಕ್ಕೆ ಸೇರಿದ 10 ಮಂದಿಯ ಹತ್ಯೆ ಬಳಿಕಇಡೀ ಗ್ರಾಮವೇ ಪೊಲೀಸರ ಭದ್ರಕೋಟೆಯಾಗಿ ಮಾರ್ಪಟ್ಟಿದೆ.ಗಲಭೆಯಲ್ಲಿ 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಅವರಲ್ಲಿ ಕೆಲವರ ಪರಿಸ್ಥಿತಿ ಚಿಂತಾಜನಕವಾಗಿದೆ. ಪೊಲೀಸರು ಈವರೆಗೆ 25 ಜನರನ್ನು ಬಂಧಿಸಿದ್ದು, 50ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದೆ.