ರಾಷ್ಟ್ರಪತಿಗಳ ಭೇಟಿ ನಂತರ ಮಾತನಾಡಿರುವ ಸೋನಿಯಾ ಗಾಂಧಿ, ‘ಮತಿಹೀನ ಉನ್ಮಾದ, ವ್ಯವಸ್ಥಿತ ಹಿಂಸಾಚಾರ ಮತ್ತು ಸಂಘಟಿತ ಲೂಟಿಗಳು ರಾಷ್ಟ್ರ ರಾಜಧಾನಿಯಲ್ಲಿ ವ್ಯಾಪಕವಾಗಿ ನಡೆಯುತ್ತಿವೆ. ಗಲಭೆ ಪೀಡಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕಿದ್ದ ದೆಹಲಿ ಮತ್ತು ಕೇಂದ್ರ ಸರ್ಕಾರಗಳು ಮೂಕ ಪ್ರೇಕ್ಷಕರಂತೆ ವರ್ತಿಸುತ್ತಿವೆ‘ ಎಂದು ಅವರು ಕಿಡಿ ಕಾರಿದ್ದಾರೆ.