ಆದರೆ, ಬಿಎಸ್ಪಿ ನಾಯಕಿ ಮಾಯಾವತಿ, ಎಸ್ಪಿ ಮುಖಂಡ ಅಖಿಲೇಶ್ ಯಾದವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಗೈರು ಎದ್ದು ಕಂಡಿತು. 2019ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಯೇತರ ಪಕ್ಷಗಳ ಮಹಾ ಮೈತ್ರಿಕೂಟದಲ್ಲಿ ಕಾಂಗ್ರೆಸ್ಗೆ ಜಾಗ ಕೊಡಲು ತಮಗೆ ಇಷ್ಟವಿಲ್ಲ ಎಂಬ ಸಂದೇಶವನ್ನು ಮಾಯಾವತಿ ಮತ್ತು ಅಖಿಲೇಶ್ ಅವರು ಗೈರುಹಾಜರಿ ಮೂಲಕ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.