ಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಸಂಜೆ ಕರೆದಿದ್ದ ಕಲಾಪ ಸಲಹಾ ಸಮಿತಿ ಸಭೆಗೆ ಯಡಿಯೂರಪ್ಪ ಹಾಜರಾಗಿರಲಿಲ್ಲ. ಈ ಕುರಿತು ಪ್ರತಿಕ್ರಿಯಿಸಿದ ರಮೇಶ್ ಕುಮಾರ್, ‘ವಿಶ್ವಾಸ ಮತ ನಿರ್ಣಯ ಮಂಡಿಸುವುದಕ್ಕೆ ಮುನ್ನ ವಿರೋಧ ಪಕ್ಷಕ್ಕೆ ಮಾಹಿತಿ ನೀಡಬೇಕು. ಆಡಳಿತ ಮತ್ತು ವಿರೋಧ ಪಕ್ಷದವರು ಸೇರಿ ನಿರ್ಣಯ ಮಂಡಿಸಲು ಒಪ್ಪಿಗೆ ನೀಡಬೇಕು. ಏಕಪಕ್ಷೀಯವಾಗಿ ಗೊತ್ತುವಳಿ ಮಂಡಿಸುವುದಕ್ಕೆ ಆಗುವುದಿಲ್ಲ’ ಎಂದರು.