‘ನನ್ನ ಪತಿ ಪ್ರಾಮಾಣಿಕ ಅಧಿಕಾರಿ. ಆದರೆ ಸುಳ್ಳು ಕೇಸು ದಾಖಲಿಸಲು ಹಿರಿಯ ಅಧಿಕಾರಿಗಳು ಒತ್ತಾಯಿಸಿದಾಗ ಅವರು ಒತ್ತಡಕ್ಕೆ ಒಳಗಾಗಿದ್ದರು. ಆದ್ದರಿಂದಲೇ ಅವರು ಮನೆಬಿಟ್ಟು ಹೋಗಿರಬಹುದು’ ಎಂದು ಶುಕ್ರವಾರ ನವಾಸ್ ಅವರ ಪತ್ನಿ ಮಾಧ್ಯಮಗಳ ಜೊತೆ ಹೇಳಿಕೊಂಡಿದ್ದರು. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕೋರಿ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ.