<p><strong>ಪಟ್ನಾ:</strong> ಮಧ್ಯ ಪ್ರದೇಶದ ನಂತರ ಕಾಂಗ್ರೆಸ್ನ ಕೇಂದ್ರ ನಾಯಕತ್ವಕ್ಕೆ ಬಿಹಾರದಲ್ಲಿಯೂ ಆಘಾತ ತರುವ ಬೆಳವಣಿಗೆಗಳು ನಡೆಯುತ್ತಿವೆ.</p>.<p>ಪಕ್ಷದ ರಾಜ್ಯ ಘಟಕದಲ್ಲಿಯೂ ಭಿನ್ನಾಭಿಪ್ರಾಯ ತಾರಕಕ್ಕೇರಿದೆ. ಶಾಸಕರ ಗುಂಪೊಂದು ಆಡಳಿತಾರೂಢ ಜೆಡಿಯುನ ಸಂಪರ್ಕದಲ್ಲಿದೆ ಎಂಬ ಮಾತುಗಳು ಕಾಂಗ್ರೆಸ್ ವರಿಷ್ಠರ ನಿದ್ದೆಗಡಿಸಿದೆ.</p>.<p>ತನ್ನ ರಾಜಕೀಯ ಅಸ್ತಿತ್ವಕ್ಕಾಗಿ ಆರ್ಜೆಡಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ 26ಶಾಸಕರನ್ನು ಹೊಂದಿದೆ. ಈ ಪೈಕಿ ಅರ್ಧಕ್ಕೂ ಅಧಿಕ ಸಂಖ್ಯೆಯ ಶಾಸಕರು ಪಕ್ಷ ತೊರೆಯುವ ಸಂದೇಶ ರವಾನಿಸಿದ್ದಾರೆ.</p>.<p>ಪಕ್ಷದಲ್ಲಿ ಈಗ ಹೇಳಿಕೊಳ್ಳುವಂಥ ಭಿನ್ನಮತವೇನೂ ಇಲ್ಲ. ಆದರೆ, ಪಕ್ಷಾಂತರ ನಿಷೇಧ ಕಾನೂನಿನ ಪ್ರಹಾರದಿಂದ ತಪ್ಪಿಸಿಕೊಳ್ಳಲು ಬೇಕಾದ ಅಗತ್ಯ ಸಂಖ್ಯೆಯಷ್ಟು ಶಾಸಕರು ಜೆಡಿಯು ಸಖ್ಯಕ್ಕೆ ಹಾತೊರೆಯುತ್ತಿರುವುದು, ರಾಜ್ಯದಲ್ಲಿ ಕಾಂಗ್ರೆಸ್ ಇಬ್ಭಾಗವಾಗುವ ಸೂಚನೆ ನೀಡಿದೆ.</p>.<p>ಬಿಹಾರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಇಂತಹ ಸಮಯದಲ್ಲಿಯೇ ಪಕ್ಷದ ಶಾಸಕರು ಭಿನ್ನ ಹಾದಿ ತುಳಿಯಲು ಮುಂದಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಈ ಭಿನ್ನಮತೀಯ ಶಾಸಕರು ಜೆಡಿಯುಗೆ ಸೇರಿ ಬಾಣದ ಗುರುತಿನೊಂದಿಗೆ ಕಣಕ್ಕಿಳಿಯಲು ಇಲ್ಲವೇ ತಮ್ಮದೇ ಗುಂಪು ರಚಿಸಿಕೊಂಡು, ನಿತೀಶ್ ಕುಮಾರ್ ಬಣದೊಂದಿಗೆ ಮೈತ್ರಿಗೆ ಸಿದ್ಧತೆ ನಡೆಸಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಮಧ್ಯ ಪ್ರದೇಶದ ನಂತರ ಕಾಂಗ್ರೆಸ್ನ ಕೇಂದ್ರ ನಾಯಕತ್ವಕ್ಕೆ ಬಿಹಾರದಲ್ಲಿಯೂ ಆಘಾತ ತರುವ ಬೆಳವಣಿಗೆಗಳು ನಡೆಯುತ್ತಿವೆ.</p>.<p>ಪಕ್ಷದ ರಾಜ್ಯ ಘಟಕದಲ್ಲಿಯೂ ಭಿನ್ನಾಭಿಪ್ರಾಯ ತಾರಕಕ್ಕೇರಿದೆ. ಶಾಸಕರ ಗುಂಪೊಂದು ಆಡಳಿತಾರೂಢ ಜೆಡಿಯುನ ಸಂಪರ್ಕದಲ್ಲಿದೆ ಎಂಬ ಮಾತುಗಳು ಕಾಂಗ್ರೆಸ್ ವರಿಷ್ಠರ ನಿದ್ದೆಗಡಿಸಿದೆ.</p>.<p>ತನ್ನ ರಾಜಕೀಯ ಅಸ್ತಿತ್ವಕ್ಕಾಗಿ ಆರ್ಜೆಡಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ 26ಶಾಸಕರನ್ನು ಹೊಂದಿದೆ. ಈ ಪೈಕಿ ಅರ್ಧಕ್ಕೂ ಅಧಿಕ ಸಂಖ್ಯೆಯ ಶಾಸಕರು ಪಕ್ಷ ತೊರೆಯುವ ಸಂದೇಶ ರವಾನಿಸಿದ್ದಾರೆ.</p>.<p>ಪಕ್ಷದಲ್ಲಿ ಈಗ ಹೇಳಿಕೊಳ್ಳುವಂಥ ಭಿನ್ನಮತವೇನೂ ಇಲ್ಲ. ಆದರೆ, ಪಕ್ಷಾಂತರ ನಿಷೇಧ ಕಾನೂನಿನ ಪ್ರಹಾರದಿಂದ ತಪ್ಪಿಸಿಕೊಳ್ಳಲು ಬೇಕಾದ ಅಗತ್ಯ ಸಂಖ್ಯೆಯಷ್ಟು ಶಾಸಕರು ಜೆಡಿಯು ಸಖ್ಯಕ್ಕೆ ಹಾತೊರೆಯುತ್ತಿರುವುದು, ರಾಜ್ಯದಲ್ಲಿ ಕಾಂಗ್ರೆಸ್ ಇಬ್ಭಾಗವಾಗುವ ಸೂಚನೆ ನೀಡಿದೆ.</p>.<p>ಬಿಹಾರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಇಂತಹ ಸಮಯದಲ್ಲಿಯೇ ಪಕ್ಷದ ಶಾಸಕರು ಭಿನ್ನ ಹಾದಿ ತುಳಿಯಲು ಮುಂದಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಈ ಭಿನ್ನಮತೀಯ ಶಾಸಕರು ಜೆಡಿಯುಗೆ ಸೇರಿ ಬಾಣದ ಗುರುತಿನೊಂದಿಗೆ ಕಣಕ್ಕಿಳಿಯಲು ಇಲ್ಲವೇ ತಮ್ಮದೇ ಗುಂಪು ರಚಿಸಿಕೊಂಡು, ನಿತೀಶ್ ಕುಮಾರ್ ಬಣದೊಂದಿಗೆ ಮೈತ್ರಿಗೆ ಸಿದ್ಧತೆ ನಡೆಸಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>