ಝೈನೀ ಹಶೀಂ ಕರೆ ಮಾಡಿರುವ ಸಿಡಿಆರ್ (ಮೊಬೈಲ್ ಕರೆ ವಿವರ) ಮಾಹಿತಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಸಂಗ್ರಹಿಸಿದೆ.ಝೈನೀ ಹಶೀಂಭಾರತದಲ್ಲಿ ಮೂರು ತಿಂಗಳು ಕಳೆದು ನಂತರ ಶ್ರೀಲಂಕಾಕ್ಕೆ ತೆರಳಿದ್ದ. ಈ ವೇಳೆ ಶ್ರೀಲಂಕಾದಿಂದ ಕೇರಳ ಮತ್ತು ತಮಿಳುನಾಡಿನಲ್ಲಿರುವ ಹಲವರಿಗೆ ಕರೆ ಮಾಡಿರುವ ಮಾಹಿತಿ ರಾಷ್ಟ್ರೀಯ ತನಖಾ ಸಂಸ್ಥೆಗೆ ಲಭ್ಯವಾಗಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.ಈಸ್ಟರ್ ದಿನದಂದು ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 250ಕ್ಕೂ ಹೆಚ್ಚು ಜನರ ಮೃತಪಟ್ಟಿದ್ದರು.