ನವದೆಹಲಿ: ಶ್ರೀಲಂಕಾ ಅಧ್ಯಕ್ಷರಾಗಿ ವಾರದ ಹಿಂದೆ ಅಧಿಕಾರ ವಹಿಸಿಕೊಂಡಿರುವ ಗೊಟಬಯ ರಾಜಪಕ್ಸೆ ಅವರು ಮೂರು ದಿನಗಳ ಭೇಟಿಗಾಗಿ ದೆಹಲಿಗೆ ಗುರುವಾರ ಬಂದಿದ್ದಾರೆ. ಅಧ್ಯಕ್ಷರಾದ ಬಳಿಕ ಅವರ ಮೊದಲ ವಿದೇಶ ಭೇಟಿ ಇದು. ಭಾರತದ ಜತೆಗೆ ದ್ವಿಪಕ್ಷೀಯ ಸಂಬಂಧವನ್ನು ಉತ್ತಮಪಡಿಸುವ ಇಚ್ಛೆ ಅವರಿಗೆ ಇದೆ ಎಂಬುದರ ಸೂಚನೆ ಇದು ಎಂದು ಹೇಳಲಾಗಿದೆ.ರಾಜಪಕ್ಸೆ ಅವರು ಚೀನಾ ಪರವಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಹಾಗಾಗಿ, ಈ ಭೇಟಿಗೆ ಹೆಚ್ಚಿನ ಮಹತ್ವ ಬಂದಿದೆ.