ಜಮ್ಮು–ಕಾಶ್ಮೀರಕ್ಕೆ ಬುಧವಾರ ಭೇಟಿ ನೀಡಿದ ಬಳಿಕ ಆಯ್ದ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ನಿಯೋಗ, ‘ನಾವು ಸುದೀರ್ಘ ವರ್ಷಗಳ ಹೋರಾಟದ ಬಳಿಕ ಶಾಂತಿ ನೆಲೆಸಿದ ಯುರೋಪ್ಗೆ ಸೇರಿದವರು. ಭಾರತವು ವಿಶ್ವದಲ್ಲೇ ಅತ್ಯಂತ ಶಾಂತಿಯುತ ರಾಷ್ಟ್ರವಾಗುವುದನ್ನು ಕಾಣಲು ನಾವು ಬಯಸುತ್ತೇವೆ. ಇದಕ್ಕಾಗಿ ನಾವು ಜಾಗತಿಕ ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದ ಪರ ನಿಲ್ಲಲಿದ್ದೇವೆ. ಈ ಭೇಟಿಯು ಇಲ್ಲಿನ ವಾಸ್ತವದ ಅರಿವು ಮೂಡಿಸಿದೆ’ ಎಂದು ಹೇಳಿದೆ.