<p><strong>ನವದೆಹಲಿ:</strong> ನೆರೆಯ ರಾಜ್ಯಗಳಿಂದ ವಲಸೆ ಕಾರ್ಮಿಕರನ್ನು ಉತ್ತರ ಪ್ರದೇಶಕ್ಕೆ ಕರೆತರಲು ನಿಯೋಜಿಸಿದ್ದ ಬಸ್ಗಳನ್ನು ಕಾಂಗ್ರೆಸ್ ಬುಧವಾರ ವಾಪಸ್ ಕರೆಸಿಕೊಂಡಿತು.</p>.<p>‘ಉತ್ತರ ಪ್ರದೇಶಕ್ಕೆ ಹೊಂದಿಕೊಂಡ ಗಡಿಯಲ್ಲಿ1,000ಕ್ಕೂ ಅಧಿಕ ಬಸ್ಗಳನ್ನು ನಿಲ್ಲಿಸಲಾಗಿದೆ. ಬುಧವಾರ ಸಂಜೆ 4 ಗಂಟೆ ವರೆಗೂ ಈ ಬಸ್ಗಳು ಅದೇ ಸ್ಥಳಗಳಲ್ಲಿ ಇರುತ್ತವೆ. ಅವುಗಳಲ್ಲಿ ಕಾರ್ಮಿಕರನ್ನು ಕರೆತನ್ನಿ’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದರು.</p>.<p>ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಉದ್ದೇಶಿಸಿ ಪ್ರಿಯಾಂಕಾ ಅವರು ಮಾತನಾಡಿರುವ ವಿಡಿಯೊವನ್ನು ಪಕ್ಷದ ಸಾಮಾಜಿಕ ಮಾಧ್ಯಮ ವಿಭಾಗ ಬಿಡುಗಡೆ ಮಾಡಿದೆ.</p>.<p>‘ಇದು ರಾಜಕಾರಣ ಮಾಡುವ ಸಮಯವಲ್ಲ. ಲಾಕ್ಡೌನ್ನಿಂದ ಸಂಕಷ್ಟ ಎದುರಿಸುತ್ತಿರುವ ವಲಸೆ ಕಾರ್ಮಿಕರಿಗೆ ನೆರವು ನೀಡುವುದು ಈಗಿನ ತುರ್ತು. ಈ ಬಸ್ಗಳ ಮೇಲೆ ನಿಮ್ಮ ಚಿತ್ರ ಇರುವ ಪೋಸ್ಟರ್, ಬ್ಯಾನರ್ಗಳನ್ನು ಬೇಕಾದರೆ ಅಳವಡಿಸಿ. ಒಟ್ಟಾರೆ ಅವುಗಳಲ್ಲಿ ಕಾರ್ಮಿಕರನ್ನು ಕರೆತನ್ನಿ’ ಎಂದು ಅವರು ಹೇಳಿದ್ದರು.</p>.<p><strong>ಬಂಧನ:</strong> ಕಾಂಗ್ರೆಸ್ನ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಅಜಯಕುಮಾರ್ ಲಲ್ಲು, ಮುಖಂಡರಾದ ಪ್ರದೀಪ ಮಾಥೂರ್, ವಿವೇಕ್ ಬನ್ಸಾಲ್ ಹಾಗೂ ಮನೋಜ್ ದೀಕ್ಷಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಪಕ್ಷ ನೀಡಿದ ಬಸ್ಗಳು ರಾಜ್ಯವನ್ನು ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಈ ಮುಖಂಡರು ಧರಣಿ ಕುಳಿತಿದ್ದರು. ಲಲ್ಲು ವಿರುದ್ಧ ಐಪಿಸಿ, ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಆಗ್ರಾ ಎಸ್ಪಿ ಬಬ್ಲೂಕುಮಾರ್ ಹೇಳಿದ್ದಾರೆ.</p>.<p>ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವ್ಯವಸ್ಥೆ ಮಾಡಿವೆ. ಕಾರ್ಮಿಕರು ನಡೆದುಕೊಂಡು ಅಥವಾ ಅಸುರಕ್ಷಿತ ಸಾರಿಗೆ ಮೂಲಕ ಬರಬಾರದು<br /><strong>-ಯೋಗಿ ಆದಿತ್ಯನಾಥ, ಉತ್ತರ ಪ್ರದೇಶ ಮುಖ್ಯಮಂತ್ರಿ </strong></p>.<p>ದೇಶವೇ ಕೋವಿಡ್–19 ವಿರುದ್ಧ ಹೋರಾಡುತ್ತಿದೆ. ಇಂತಹ ಸಂಕಷ್ಟ ಸಮಯದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಈ ವರೆಗೆ ಯಾವ ರಾಜಕೀಯ ಪಕ್ಷವೂ ಈ ರೀತಿ ವರ್ತಿಸಿಲ್ಲ<br /><strong>-ದಿನೇಶ್ ಶರ್ಮ, ಉತ್ತರ ಪ್ರದೇಶ ಉಪಮುಖ್ಯಮಂತ್ರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೆರೆಯ ರಾಜ್ಯಗಳಿಂದ ವಲಸೆ ಕಾರ್ಮಿಕರನ್ನು ಉತ್ತರ ಪ್ರದೇಶಕ್ಕೆ ಕರೆತರಲು ನಿಯೋಜಿಸಿದ್ದ ಬಸ್ಗಳನ್ನು ಕಾಂಗ್ರೆಸ್ ಬುಧವಾರ ವಾಪಸ್ ಕರೆಸಿಕೊಂಡಿತು.</p>.<p>‘ಉತ್ತರ ಪ್ರದೇಶಕ್ಕೆ ಹೊಂದಿಕೊಂಡ ಗಡಿಯಲ್ಲಿ1,000ಕ್ಕೂ ಅಧಿಕ ಬಸ್ಗಳನ್ನು ನಿಲ್ಲಿಸಲಾಗಿದೆ. ಬುಧವಾರ ಸಂಜೆ 4 ಗಂಟೆ ವರೆಗೂ ಈ ಬಸ್ಗಳು ಅದೇ ಸ್ಥಳಗಳಲ್ಲಿ ಇರುತ್ತವೆ. ಅವುಗಳಲ್ಲಿ ಕಾರ್ಮಿಕರನ್ನು ಕರೆತನ್ನಿ’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದರು.</p>.<p>ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಉದ್ದೇಶಿಸಿ ಪ್ರಿಯಾಂಕಾ ಅವರು ಮಾತನಾಡಿರುವ ವಿಡಿಯೊವನ್ನು ಪಕ್ಷದ ಸಾಮಾಜಿಕ ಮಾಧ್ಯಮ ವಿಭಾಗ ಬಿಡುಗಡೆ ಮಾಡಿದೆ.</p>.<p>‘ಇದು ರಾಜಕಾರಣ ಮಾಡುವ ಸಮಯವಲ್ಲ. ಲಾಕ್ಡೌನ್ನಿಂದ ಸಂಕಷ್ಟ ಎದುರಿಸುತ್ತಿರುವ ವಲಸೆ ಕಾರ್ಮಿಕರಿಗೆ ನೆರವು ನೀಡುವುದು ಈಗಿನ ತುರ್ತು. ಈ ಬಸ್ಗಳ ಮೇಲೆ ನಿಮ್ಮ ಚಿತ್ರ ಇರುವ ಪೋಸ್ಟರ್, ಬ್ಯಾನರ್ಗಳನ್ನು ಬೇಕಾದರೆ ಅಳವಡಿಸಿ. ಒಟ್ಟಾರೆ ಅವುಗಳಲ್ಲಿ ಕಾರ್ಮಿಕರನ್ನು ಕರೆತನ್ನಿ’ ಎಂದು ಅವರು ಹೇಳಿದ್ದರು.</p>.<p><strong>ಬಂಧನ:</strong> ಕಾಂಗ್ರೆಸ್ನ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಅಜಯಕುಮಾರ್ ಲಲ್ಲು, ಮುಖಂಡರಾದ ಪ್ರದೀಪ ಮಾಥೂರ್, ವಿವೇಕ್ ಬನ್ಸಾಲ್ ಹಾಗೂ ಮನೋಜ್ ದೀಕ್ಷಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಪಕ್ಷ ನೀಡಿದ ಬಸ್ಗಳು ರಾಜ್ಯವನ್ನು ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಈ ಮುಖಂಡರು ಧರಣಿ ಕುಳಿತಿದ್ದರು. ಲಲ್ಲು ವಿರುದ್ಧ ಐಪಿಸಿ, ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಆಗ್ರಾ ಎಸ್ಪಿ ಬಬ್ಲೂಕುಮಾರ್ ಹೇಳಿದ್ದಾರೆ.</p>.<p>ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವ್ಯವಸ್ಥೆ ಮಾಡಿವೆ. ಕಾರ್ಮಿಕರು ನಡೆದುಕೊಂಡು ಅಥವಾ ಅಸುರಕ್ಷಿತ ಸಾರಿಗೆ ಮೂಲಕ ಬರಬಾರದು<br /><strong>-ಯೋಗಿ ಆದಿತ್ಯನಾಥ, ಉತ್ತರ ಪ್ರದೇಶ ಮುಖ್ಯಮಂತ್ರಿ </strong></p>.<p>ದೇಶವೇ ಕೋವಿಡ್–19 ವಿರುದ್ಧ ಹೋರಾಡುತ್ತಿದೆ. ಇಂತಹ ಸಂಕಷ್ಟ ಸಮಯದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಈ ವರೆಗೆ ಯಾವ ರಾಜಕೀಯ ಪಕ್ಷವೂ ಈ ರೀತಿ ವರ್ತಿಸಿಲ್ಲ<br /><strong>-ದಿನೇಶ್ ಶರ್ಮ, ಉತ್ತರ ಪ್ರದೇಶ ಉಪಮುಖ್ಯಮಂತ್ರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>