<p><strong>ನವದೆಹಲಿ: </strong>ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸುತ್ತಿರುವ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರವು ಕಡ್ಡಾಯವಾಗಿ ಜಾರಿಗೊಳಿಸುವಂತೆ ಒತ್ತಡ ಹೇರುವಂತಿಲ್ಲ ಎಂದು ಕಾಂಗ್ರೆಸ್ ಹೇಳಿದೆ.</p>.<p>ಕಾಯ್ದೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಕಾಯ್ದೆ ವಿರುದ್ಧ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸುಪ್ರೀಂ ಕೋರ್ಟ್ನ ಅಂಗಳದಲ್ಲಿವೆ. ಸುಪ್ರೀಂ ವಿಚಾರಣೆ ನಡೆಸಿ ತೀರ್ಪು ನೀಡುವವರೆಗೆ ಕೇಂದ್ರವು ರಾಜ್ಯಗಳ ಮೇಲೆ ಒತ್ತಡ ಹೇರಬಾರದು ಎಂದು ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೇವಾಲಾ ಭಾನುವಾರ ಆಗ್ರಹಿಸಿದ್ದಾರೆ.</p>.<p>ಕಾಯ್ದೆಯು ಸಂವಿಧಾನದ ಮೇಲೆ ನಡೆಸಿದ ದಾಳಿಯಾಗಿದೆ. ಇದರ ವಿರುದ್ಧ ದೇಶದ ಜನರು ಬೀದಿಗಿಳಿದಿದ್ದಾರೆ. ಚಳವಳಿ, ಹೋರಾಟಗಳು ಮುಂದುವರಿಯಲಿವೆ ಎಂದು ಅವರು ಹೇಳಿದ್ದಾರೆ.</p>.<p>ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು, ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗೊಳಿಸಲು ಯಾವ ರಾಜ್ಯವು ಹಿಂದೇಟು ಹಾಕುವಂತಿಲ್ಲ. ಸಂವಿಧಾನ ಬದ್ಧವಾಗಿಯೇ ಸಂಸತ್ನಲ್ಲಿ ಅನುಮೋದನೆಗೊಂಡಿದ್ದು, ಅದರ ಜಾರಿಗೆ ವಿರೋಧಿಸುವಂತಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸುರ್ಜೇವಾಲಾ ಹೇಳಿಕೆ ಮಹತ್ವ ಪಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸುತ್ತಿರುವ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರವು ಕಡ್ಡಾಯವಾಗಿ ಜಾರಿಗೊಳಿಸುವಂತೆ ಒತ್ತಡ ಹೇರುವಂತಿಲ್ಲ ಎಂದು ಕಾಂಗ್ರೆಸ್ ಹೇಳಿದೆ.</p>.<p>ಕಾಯ್ದೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಕಾಯ್ದೆ ವಿರುದ್ಧ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸುಪ್ರೀಂ ಕೋರ್ಟ್ನ ಅಂಗಳದಲ್ಲಿವೆ. ಸುಪ್ರೀಂ ವಿಚಾರಣೆ ನಡೆಸಿ ತೀರ್ಪು ನೀಡುವವರೆಗೆ ಕೇಂದ್ರವು ರಾಜ್ಯಗಳ ಮೇಲೆ ಒತ್ತಡ ಹೇರಬಾರದು ಎಂದು ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೇವಾಲಾ ಭಾನುವಾರ ಆಗ್ರಹಿಸಿದ್ದಾರೆ.</p>.<p>ಕಾಯ್ದೆಯು ಸಂವಿಧಾನದ ಮೇಲೆ ನಡೆಸಿದ ದಾಳಿಯಾಗಿದೆ. ಇದರ ವಿರುದ್ಧ ದೇಶದ ಜನರು ಬೀದಿಗಿಳಿದಿದ್ದಾರೆ. ಚಳವಳಿ, ಹೋರಾಟಗಳು ಮುಂದುವರಿಯಲಿವೆ ಎಂದು ಅವರು ಹೇಳಿದ್ದಾರೆ.</p>.<p>ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು, ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗೊಳಿಸಲು ಯಾವ ರಾಜ್ಯವು ಹಿಂದೇಟು ಹಾಕುವಂತಿಲ್ಲ. ಸಂವಿಧಾನ ಬದ್ಧವಾಗಿಯೇ ಸಂಸತ್ನಲ್ಲಿ ಅನುಮೋದನೆಗೊಂಡಿದ್ದು, ಅದರ ಜಾರಿಗೆ ವಿರೋಧಿಸುವಂತಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸುರ್ಜೇವಾಲಾ ಹೇಳಿಕೆ ಮಹತ್ವ ಪಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>