ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ದಾರ್ ವಲ್ಲಭಭಾಯಿ ಏಕತಾಮೂರ್ತಿ ಸ್ಥಳಕ್ಕೆ ರೈಲು ಸಂಪರ್ಕ

Last Updated 12 ಡಿಸೆಂಬರ್ 2018, 13:53 IST
ಅಕ್ಷರ ಗಾತ್ರ

ನವದೆಹಲಿ: ಗುಜರಾತಿನ ನರ್ಮದಾ ಜಿಲ್ಲೆಯಲ್ಲಿ ಇತ್ತೀಚೆಗೆ ನಿರ್ಮಿಸಿರುವ ಸರ್ದಾರ್ ವಲ್ಲಭಭಾಯಿ ಅವರ ಏಕತಾ ಮೂರ್ತಿ ಸ್ಥಳಕ್ಕೆ ತೆರಳಲು ರೈಲು ಸಂಪರ್ಕ ಕಲ್ಪಿಸಲಾಗುತ್ತಿದೆ.

ಪಟೇಲ್ ವಿಗ್ರಹದಿಂದ 3.5 ಕಿ.ಮೀ ದೂರದಲ್ಲಿರುವ ಕೆವಡಿಯ ಗ್ರಾಮದಲ್ಲಿ ರೈಲ್ವೆ ನಿಲ್ದಾಣ ನಿರ್ಮಸಲಾಗುತ್ತದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 15ರಂದು ಇದಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಈ ಸ್ಥಳಕ್ಕೆ ನಿತ್ಯ 15 ಸಾವಿರ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಅವರ ಅನುಕೂಲಕ್ಕಾಗಿ ರೈಲು ಸಂಪರ್ಕ ಕಲ್ಪಿಸಲಾಗುತ್ತಿದೆ. ರೈಲ್ವೆ ನಿಲ್ದಾಣವು ಆಧುನಿಕ ಸೌಲಭ್ಯಗಳನ್ನು ಹೊಂದಿರಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT