ಬೆಂಗಳೂರು:‘ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ’ ಎನ್ನುವ ಕ್ರಾಂತಿಕಾರಿ ಘೋಷಣೆ ಮೊಳಗಿಸಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 123ನೇ ಜಯಂತಿ ಪ್ರಯುಕ್ತ ಜಾರ್ಖಾಂಡ್ ಸರ್ಕಾರ ಸಾರ್ವತ್ರಿಕ ರಜೆ ನೀಡಲು ನಿರ್ಧರಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್, ‘ಜಗತ್ತು ಕಂಡ ಮಹಾನ್ ಸ್ವಾತಂತ್ರ್ಯ ಯೋಧ ನೇತಾಜಿ ಜನ್ಮದಿನದಂದು ಸರ್ಕಾರಿ ರಜೆ ಘೋಷಿಸುವ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಹೇಳಿದ್ದಾರೆ.
‘ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕರ್ಮಭೂಮಿ ಜಾರ್ಖಂಡ್ ಆಗಿದ್ದು, ಅವರ ತತ್ವಾದರ್ಶಗಳನ್ನು ಯುವ ಪೀಳಿಗೆಗೆ ತಲುಪಿಸುವುದು ಸರ್ಕಾರದ ಕರ್ತವ್ಯ’ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಗಣ್ಯರ ಸ್ಮರಣೆ
ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ವಿವಿಧ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಸ್ಮರಿಸಿ ಪೋಸ್ಟ್ ಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕಅವರನ್ನು ಸ್ಮರಿಸಿದ್ದು, ‘ಸುಭಾಷ್ ಚಂದ್ರ ಬೋಸ್ ಅವರ ಧೈರ್ಯ ಮತ್ತು ಸ್ವಾತಂತ್ರ್ಯಕ್ಕಾಗಿ ಅವರು ನೀಡಿದ ಕೊಡುಗೆಗೆ ಭಾರತ ಅವರಿಗೆ ಸದಾ ಕೃತಜ್ಞರಾಗಿರುತ್ತದೆ. ಭಾರತೀಯರ ಪ್ರಗತಿ ಮತ್ತು ಅವರ ಉತ್ತಮ ಬದುಕಿಗಾಗಿ ಹೋರಾಡಿದವರು ಎಂದು ಹೇಳಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿಬಹುತೇಕರಾಜ್ಯಗಳ ಮುಖ್ಯಮಂತ್ರಿಗಳು ಬೋಸ್ ಅವರ ಸ್ವಾತಂತ್ರ್ಯ ಹೋರಾಟದ ಹಾದಿ, ದೇಶಕ್ಕಾಗಿ ನೀಡಿದ ಕೊಡುಗೆಗಳನ್ನು ಸ್ಮರಿಸಿ ಟ್ಟಿಟ್ಟರ್ನಲ್ಲಿಪೋಸ್ಟ್ಗಳನ್ನು ಪ್ರಕಟಿಸಿದ್ದಾರೆ.
ಬೋಸ್ ಜನ್ಮದಿನದ ಪ್ರಯುಕ್ತ ಅನೇಕರು ಅವರನ್ನು ಸ್ಮರಿಸಿದ್ದು ಟ್ವಿಟ್ಟರ್ನಲ್ಲಿ #NetajiJayanti #subhashchandrabose, #NetajiSubhasChandraBose ಎಂಬ ಹ್ಯಾಷ್ಟ್ಯಾಗ್ಗಳುಟ್ರೆಂಡ್ ಆಗಿವೆ. ಸುಮಾರು 25 ಸಾವಿರ ಮಂದಿ ಈ ಹ್ಯಾಷ್ಟ್ಯಾಗ್ಗಳನ್ನು ಬಳಸಿ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.