ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರೋಮಣಿ ಅಕಾಲಿ ದಳ: ರಾಜ್ಯಸಭೆ ನಾಯಕ ಸ್ಥಾನಕ್ಕೆ ಢೀಂಡಸ ರಾಜೀನಾಮೆ

Last Updated 19 ಅಕ್ಟೋಬರ್ 2019, 11:26 IST
ಅಕ್ಷರ ಗಾತ್ರ

ಚಂಡೀಗಡ: ರಾಜ್ಯ ಸಭೆಯಲ್ಲಿ ಶಿರೋಮಣಿ ಅಕಾಲಿ ದಳದ (ಎಸ್‌ಎಡಿ)ನಾಯಕ ಸ್ಥಾನಕ್ಕೆ ಸುಖದೇವ್‌ಸಿಂಗ್‌ ಢೀಂಡಸ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ಅವರು ಸಭಾಪತಿ ವೆಂಕಯ್ಯ ನಾಯ್ಡು ಅವರಿಗೆ ಶನಿವಾರ ರಾಜೀನಾಮೆ ಪತ್ರವನ್ನು ನೀಡಿದ್ದು, ರಾಜೀನಾಮೆಗೆ ಕಾರಣವನ್ನು ತಿಳಿಸಿಲ್ಲ. ಆದರೆ, ‘ನಾಯಕತ್ವ ಬದಲಾವಣೆಯು ಪಕ್ಷದ ತೀರ್ಮಾನವಾಗಿದ್ದು, ಅದನ್ನು ಜೂನ್‌ ತಿಂಗಳಲ್ಲೇ ಸಂಸದೀಯ ವ್ಯವಹಾರಗಳ ಖಾತೆ ಸಚಿವರಿಗೆ ತಿಳಿಸಲಾಗಿತ್ತು’ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪಕ್ಷದ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ದಲ್‌ಜೀತ್‌ ಸಿಂಗ್‌ ಅವರನ್ನು ಈಗಾಗಲೇ ರಾಜ್ಯಸಭೆಯಲ್ಲಿ ಪಕ್ಷದ ನಾಯಕರಾಗಿ ಮತ್ತು ನರೇಶ್‌ ಗುಜರಾಲ್‌ ಅವರನ್ನು ಉಪನಾಯಕನಾಗೆ ಆಯ್ಕೆ ಮಾಡಲಾಗಿದೆ ಎಂದು ಪಕ್ಷ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT