<p><strong>ಬೆಂಗಳೂರು:</strong> ಸುಮನಹಳ್ಳಿ ಮೇಲ್ಸೇತುವೆ ಗುಣಮಟ್ಟದಲ್ಲಿ ಲೋಪ–ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಮೇಯರ್ ಎಂ. ಗೌತಮ್ ಕುಮಾರ್ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಸೇತುವೆಯ ಬೇರಿಂಗ್ನಲ್ಲಿ ದೋಷ, ಮೇಲ್ಸೇತುವೆ ಮಧ್ಯಭಾಗದಲ್ಲಿ ಸಮರ್ಪಕವಾಗಿ ಸ್ಲ್ಯಾಬ್ ಅಳವಡಿಸದಿರುವುದು, ಸಿಮೆಂಟ್ ಮಿಶ್ರಣದಲ್ಲಿ ಲೋಪವಿರುವುದು ಇತ್ತೀಚೆಗೆ ಬೆಳಕಿಗೆ ಬಂದಿತ್ತು.</p>.<p>ಸೇತುವೆಯನ್ನು ಪರಿಶೀಲಿಸಿದ ಮೇಯರ್, ‘ಸುರಕ್ಷತೆ ದೃಷ್ಟಿಯಿಂದ ಸೇತುವೆಯನ್ನು ದುರಸ್ತಿಪಡಿಸಲಾಗುವುದು. ಡಿ.15ರಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>‘ಸಿವಿಲ್ ಎಡ್ ಟೆಕ್ನೋಕ್ಲಿನಿಕ್ ಸಂಸ್ಥೆಯ ತಾಂತ್ರಿಕ ತಜ್ಞರ ತಂಡವು ಮೇಲ್ಸೇತುವೆಯ ಬೇರಿಂಗ್ಗಳು, ಕಾಂಕ್ರೀಟ್ ಮಿಶ್ರಣ ಸೇರಿದಂತೆ ಇನ್ನಿತರ ದುರಸ್ತಿಗಾಗಿ ₹40 ಲಕ್ಷ ವೆಚ್ಚವಾಗಲಿದೆ ಎಂದು ಹೇಳಿದೆ’ ಎಂದು ಅವರು ತಿಳಿಸಿದರು.</p>.<p>‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು 2010ರಲ್ಲಿ ಈ ಮೇಲ್ಸೇತುವೆಯನ್ನು ನಿರ್ಮಿಸಿತ್ತು. 2016ರಲ್ಲಿ ಬಿಬಿಎಂಪಿಗೆ ಹಸ್ತಾಂತರಿಸಿದೆ. ಈಗ ಇದರ ನಿರ್ವಹಣೆ ಹೊಣೆ ಬಿಬಿಎಂಪಿಯದ್ದು. ಹಾಗಾಗಿ ಪಾಲಿಕೆಯೇ ಈ ವೆಚ್ಚವನ್ನು ಭರಿಸಲಿದೆ’ ಎಂದರು.</p>.<p>‘ಮೇಲ್ಸೇತುವೆ ಸುರಕ್ಷಿತವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ. ಸುರಕ್ಷತೆಯ ದೃಷ್ಟಿಯಿಂದ ದುರಸ್ತಿ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಿ, ಶೀಘ್ರವೇ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅನುವುಮಾಡಿಕೊಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸುಮನಹಳ್ಳಿ ಮೇಲ್ಸೇತುವೆ ಗುಣಮಟ್ಟದಲ್ಲಿ ಲೋಪ–ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಮೇಯರ್ ಎಂ. ಗೌತಮ್ ಕುಮಾರ್ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಸೇತುವೆಯ ಬೇರಿಂಗ್ನಲ್ಲಿ ದೋಷ, ಮೇಲ್ಸೇತುವೆ ಮಧ್ಯಭಾಗದಲ್ಲಿ ಸಮರ್ಪಕವಾಗಿ ಸ್ಲ್ಯಾಬ್ ಅಳವಡಿಸದಿರುವುದು, ಸಿಮೆಂಟ್ ಮಿಶ್ರಣದಲ್ಲಿ ಲೋಪವಿರುವುದು ಇತ್ತೀಚೆಗೆ ಬೆಳಕಿಗೆ ಬಂದಿತ್ತು.</p>.<p>ಸೇತುವೆಯನ್ನು ಪರಿಶೀಲಿಸಿದ ಮೇಯರ್, ‘ಸುರಕ್ಷತೆ ದೃಷ್ಟಿಯಿಂದ ಸೇತುವೆಯನ್ನು ದುರಸ್ತಿಪಡಿಸಲಾಗುವುದು. ಡಿ.15ರಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>‘ಸಿವಿಲ್ ಎಡ್ ಟೆಕ್ನೋಕ್ಲಿನಿಕ್ ಸಂಸ್ಥೆಯ ತಾಂತ್ರಿಕ ತಜ್ಞರ ತಂಡವು ಮೇಲ್ಸೇತುವೆಯ ಬೇರಿಂಗ್ಗಳು, ಕಾಂಕ್ರೀಟ್ ಮಿಶ್ರಣ ಸೇರಿದಂತೆ ಇನ್ನಿತರ ದುರಸ್ತಿಗಾಗಿ ₹40 ಲಕ್ಷ ವೆಚ್ಚವಾಗಲಿದೆ ಎಂದು ಹೇಳಿದೆ’ ಎಂದು ಅವರು ತಿಳಿಸಿದರು.</p>.<p>‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು 2010ರಲ್ಲಿ ಈ ಮೇಲ್ಸೇತುವೆಯನ್ನು ನಿರ್ಮಿಸಿತ್ತು. 2016ರಲ್ಲಿ ಬಿಬಿಎಂಪಿಗೆ ಹಸ್ತಾಂತರಿಸಿದೆ. ಈಗ ಇದರ ನಿರ್ವಹಣೆ ಹೊಣೆ ಬಿಬಿಎಂಪಿಯದ್ದು. ಹಾಗಾಗಿ ಪಾಲಿಕೆಯೇ ಈ ವೆಚ್ಚವನ್ನು ಭರಿಸಲಿದೆ’ ಎಂದರು.</p>.<p>‘ಮೇಲ್ಸೇತುವೆ ಸುರಕ್ಷಿತವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ. ಸುರಕ್ಷತೆಯ ದೃಷ್ಟಿಯಿಂದ ದುರಸ್ತಿ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಿ, ಶೀಘ್ರವೇ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅನುವುಮಾಡಿಕೊಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>