<p><strong>ನವದೆಹಲಿ: </strong>ಮರಣದಂಡನೆಗೆ ಒಳಗಾದ ಅಪರಾಧಿಗಳನ್ನು ನೇಣಿಗೇರಿಸುವ ಇಬ್ಬರು ಸಿಬ್ಬಂದಿಯನ್ನು ಕಳುಹಿಸಿಕೊಡಿ ಎಂದು ತಿಹಾರ್ ಜೈಲಿನ ಅಧೀಕ್ಷಕರು ಪತ್ರಮುಖೇನ ಮನವಿ ಮಾಡಿದ್ದಾರೆ ಎಂದು ಉತ್ತರ ಪ್ರದೇಶಬಂಧೀಖಾನೆ ಹೆಚ್ಚುವರಿ ಮಹಾನಿರ್ದೇಶಕ ಆನಂದ್ ಕುಮಾರ್ ತಿಳಿಸಿದ್ದಾರೆ.</p>.<p>ಇದರಿಂದಾಗಿ ದೆಹಲಿ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸುವ ಊಹಾಪೋಹಗಳು ಖಚಿತವಾಗಬಹುದು. ತಿಹಾರ್ ಜೈಲಿನ ಅಧೀಕ್ಷಕರ ಮನವಿ ಮೇರೆಗೆ ನೇಣಿಗೇರಿಸುವ ಇಬ್ಬರು ಸಿಬ್ಬಂದಿಯನ್ನು ಆದಷ್ಟು ಬೇಗ ಕಳುಹಿಸಲಾಗುವುದು ಎಂದು ಆನಂದಕುಮಾರ್ ಸುದ್ದಿ ಸಂಸ್ಥೆಗೆ ಖಚಿತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/tihar-officials-get-15-volunteers-to-hang-gang-rape-convicts-689634.html" target="_blank">ನಿರ್ಭಯ ಪ್ರಕರಣದ ದೋಷಿಗಳನ್ನು ನೇಣಿಗೇರಿಸಲು ಮುಂದೆ ಬಂದರು15 ಮಂದಿ</a></p>.<p>ದೆಹಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಾದಅಕ್ಷಯ್, ರಾಮ್ ಸಿಂಗ್, ಮುಖೇಶ್, ವಿನಯ್ ಶರ್ಮಾ ಹಾಗೂ ಪವನ್ ಗುಪ್ತಾ ಎಂಬುವರಿಗೆ ಮರಣದಂಡನೆ ತೀರ್ಪು ವಿಧಿಸಿ ಒಂದು ವರ್ಷ ಕಳೆದಿದ್ದರೂ ಆರೋಪಿಗಳು ತಿಹಾರ್ ಜೈಲಿನಲ್ಲಿಯೇ ಇದ್ದಾರೆ.</p>.<p>ಇತ್ತೀಚೆಗೆ ತೆಲಂಗಾಣದಲ್ಲಿ ಪಶುವೈದ್ಯೆಯೊಬ್ಬರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ನಾಲ್ಕು ಮಂದಿಯನ್ನು ಅಲ್ಲಿನ ಪೊಲೀಸರು ಎನ್ ಕೌಂಟರ್ ಮಾಡುವ ಮೂಲಕ ಪ್ರಕರಣಕ್ಕೆ ಅಂತ್ಯ ಕಾಣಿಸಿದ್ದರು. ಈ ಬೆಳವಣಿಗೆಗಳ ನಂತರ ಇಡೀ ರಾಷ್ಟ್ರದಲ್ಲಿ ದೆಹಲಿ ಅತ್ಯಾಚಾರಿಗಳನ್ನು ಮರಣದಂಡನೆಗೆ ಒಳಪಡಿಸಬೇಕೆಂಬ ಒತ್ತಾಯ ಕೇಳಿಬಂದಿದ್ದವು. ಈ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇದೀಗ ಉತ್ತರಪ್ರದೇಶ ಬಂಧೀಖಾನೆ ಇಲಾಖೆಯ ಹೆಚ್ಚುವರಿ ಮಹಾ ನಿರ್ದೇಶಕರು ಇದನ್ನು ಖಚಿತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮರಣದಂಡನೆಗೆ ಒಳಗಾದ ಅಪರಾಧಿಗಳನ್ನು ನೇಣಿಗೇರಿಸುವ ಇಬ್ಬರು ಸಿಬ್ಬಂದಿಯನ್ನು ಕಳುಹಿಸಿಕೊಡಿ ಎಂದು ತಿಹಾರ್ ಜೈಲಿನ ಅಧೀಕ್ಷಕರು ಪತ್ರಮುಖೇನ ಮನವಿ ಮಾಡಿದ್ದಾರೆ ಎಂದು ಉತ್ತರ ಪ್ರದೇಶಬಂಧೀಖಾನೆ ಹೆಚ್ಚುವರಿ ಮಹಾನಿರ್ದೇಶಕ ಆನಂದ್ ಕುಮಾರ್ ತಿಳಿಸಿದ್ದಾರೆ.</p>.<p>ಇದರಿಂದಾಗಿ ದೆಹಲಿ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸುವ ಊಹಾಪೋಹಗಳು ಖಚಿತವಾಗಬಹುದು. ತಿಹಾರ್ ಜೈಲಿನ ಅಧೀಕ್ಷಕರ ಮನವಿ ಮೇರೆಗೆ ನೇಣಿಗೇರಿಸುವ ಇಬ್ಬರು ಸಿಬ್ಬಂದಿಯನ್ನು ಆದಷ್ಟು ಬೇಗ ಕಳುಹಿಸಲಾಗುವುದು ಎಂದು ಆನಂದಕುಮಾರ್ ಸುದ್ದಿ ಸಂಸ್ಥೆಗೆ ಖಚಿತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/tihar-officials-get-15-volunteers-to-hang-gang-rape-convicts-689634.html" target="_blank">ನಿರ್ಭಯ ಪ್ರಕರಣದ ದೋಷಿಗಳನ್ನು ನೇಣಿಗೇರಿಸಲು ಮುಂದೆ ಬಂದರು15 ಮಂದಿ</a></p>.<p>ದೆಹಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಾದಅಕ್ಷಯ್, ರಾಮ್ ಸಿಂಗ್, ಮುಖೇಶ್, ವಿನಯ್ ಶರ್ಮಾ ಹಾಗೂ ಪವನ್ ಗುಪ್ತಾ ಎಂಬುವರಿಗೆ ಮರಣದಂಡನೆ ತೀರ್ಪು ವಿಧಿಸಿ ಒಂದು ವರ್ಷ ಕಳೆದಿದ್ದರೂ ಆರೋಪಿಗಳು ತಿಹಾರ್ ಜೈಲಿನಲ್ಲಿಯೇ ಇದ್ದಾರೆ.</p>.<p>ಇತ್ತೀಚೆಗೆ ತೆಲಂಗಾಣದಲ್ಲಿ ಪಶುವೈದ್ಯೆಯೊಬ್ಬರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ನಾಲ್ಕು ಮಂದಿಯನ್ನು ಅಲ್ಲಿನ ಪೊಲೀಸರು ಎನ್ ಕೌಂಟರ್ ಮಾಡುವ ಮೂಲಕ ಪ್ರಕರಣಕ್ಕೆ ಅಂತ್ಯ ಕಾಣಿಸಿದ್ದರು. ಈ ಬೆಳವಣಿಗೆಗಳ ನಂತರ ಇಡೀ ರಾಷ್ಟ್ರದಲ್ಲಿ ದೆಹಲಿ ಅತ್ಯಾಚಾರಿಗಳನ್ನು ಮರಣದಂಡನೆಗೆ ಒಳಪಡಿಸಬೇಕೆಂಬ ಒತ್ತಾಯ ಕೇಳಿಬಂದಿದ್ದವು. ಈ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇದೀಗ ಉತ್ತರಪ್ರದೇಶ ಬಂಧೀಖಾನೆ ಇಲಾಖೆಯ ಹೆಚ್ಚುವರಿ ಮಹಾ ನಿರ್ದೇಶಕರು ಇದನ್ನು ಖಚಿತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>