ಸಂವಿಧಾನ ಪೀಠಕ್ಕೆ ಒಪ್ಪಿಸಬೇಕೇ ಮತ್ತು ಮಧ್ಯಂತರ ಆದೇಶ ನೀಡಬೇಕೇ ಎಂಬ ಎರಡು ವಿಚಾರಗಳನ್ನು ಪರಿಶೀಲಿಸಬೇಕಿದೆ ಎಂದು ಅರ್ಜಿದಾರರಲ್ಲಿ ಒಬ್ಬರ ಪರ ವಕೀಲ ರಾಜೀವ್ ಧವನ್ ಪ್ರತಿಪಾದಿಸಿದರು. ಲಕ್ಷಾಂತರ ಹುದ್ದೆಗಳನ್ನು ಭರ್ತಿ ಮಾಡುವ ಅಗತ್ಯ ಇದೆ. ಹಾಗಿರುವಾಗ, ಪ್ರಕರಣವನ್ನು ಸಂವಿಧಾನ ಪೀಠಕ್ಕೆ ಒಪ್ಪಿಸುವುದಾದರೆ ಮಧ್ಯಂತರ ಆದೇಶವನ್ನೂ ನೀಡಬೇಕು ಎಂದರು.