<p class="title"><strong>ನವದೆಹಲಿ</strong>: ಸಾಲದ ಕಂತು ಮರುಪಾವತಿ ಮುಂದೂಡಿಕೆ ಅವಧಿಯ ಬಡ್ಡಿಯ ಮೇಲಿನ ಬಡ್ಡಿ ಮನ್ನಾ ವಿಚಾರದಲ್ಲಿ ಮೂರು ದಿನಗಳೊಳಗೆ ಸಭೆ ಸೇರಿ ನಿರ್ಧಾರ ಕೈಗೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವಾಲಯ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ಗೆ (ಆರ್ಬಿಐ) ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.</p>.<p class="title">ಬಡ್ಡಿ ಪಾವತಿಯನ್ನು ನಿರ್ದಿಷ್ಟ ಅವಧಿಗೆ ಮುಂದೂಡಿದ್ದರೆ, ಆ ಅವಧಿಯ ಬಡ್ಡಿಯ ಮೇಲೆ ಬ್ಯಾಂಕುಗಳು ಬಡ್ಡಿ ಹೇರಬಾರದು ಎಂದು ಪೀಠವು ಸ್ಪಷ್ಟವಾಗಿ ಹೇಳಿದೆ.</p>.<p class="title">ಮುಂದೂಡಿಕೆಯ ಪೂರ್ಣ ಅವಧಿಯ ಬಡ್ಡಿ ಮನ್ನಾ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲು ಸೂಚಿಸಿಲ್ಲ. ಇದು ಬಡ್ಡಿಯ ಮೇಲೆ ಬ್ಯಾಂಕುಗಳು ವಿಧಿಸುವ ಬಡ್ಡಿಗಷ್ಟೇ ಸೀಮಿತ ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್.ಕೆ. ಕೌಲ್ ಮತ್ತು ಎಂ.ಆರ್. ಶಾ ಅವರ ಪೀಠವು ಸ್ಪಷ್ಟಪಡಿಸಿದೆ.</p>.<p>ಆರ್ಬಿಐ ಜತೆಗೆ ಸಮಾಲೋಚನೆ ನಡೆಸಿದ ಬಳಿಕ ಪ್ರಮಾಣಪತ್ರ ಸಲ್ಲಿಸುವಂತೆ ಕೇಂದ್ರಕ್ಕೆ ಪೀಠವು ಸೂಚಿಸಿದೆ.</p>.<p>ಕಂತು ಪಾವತಿಯ ಅವಧಿಯನ್ನು ಆರು ತಿಂಗಳ ಅವಧಿಗೆ ಮುಂದೂಡಲಾಗಿದೆ. ಈ ಅವಧಿಗೆ ಬಡ್ಡಿ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಎಸ್ಬಿಐ ಮತ್ತು ಭಾರತೀಯ ಬ್ಯಾಂಕುಗಳ ಸಂಘಟನೆಯು ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>ಮುಂದೂಡಿಕೆ ಅವಧಿಯ ಬಡ್ಡಿಯ ಮೊತ್ತವನ್ನು ಸಾಲ ಎಂದು ಪರಿಗಣಿಸಿ, 2021ರ ಮಾರ್ಚ್ 31ರ ಒಳಗೆ ಪಾವತಿಸುವ ಅವಕಾಶವನ್ನು ಬ್ಯಾಂಕುಗಳು ನೀಡಬಹುದು. ಆದರೆ, ಇದು ಆಯಾ ಬ್ಯಾಂಕುಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಆರ್ಬಿಐ, ಕೋರ್ಟ್ಗೆ ಈ ಹಿಂದೆಯೇ ಹೇಳಿತ್ತು.</p>.<p>ಮಾರ್ಚ್ 27, ಏಪ್ರಿಲ್ 17ರಂದು ಸುತ್ತೋಲೆ ಹೊರಡಿಸಿದ್ದ ಆರ್ಬಿಐ, ಸಾಲದ ಕಂತು ಪಾವತಿಯನ್ನು ಮೂರು ತಿಂಗಳು ಮುಂದೂಡಿತ್ತು. ಬಳಿಕ, ಅದನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಸಾಲದ ಕಂತು ಮರುಪಾವತಿ ಮುಂದೂಡಿಕೆ ಅವಧಿಯ ಬಡ್ಡಿಯ ಮೇಲಿನ ಬಡ್ಡಿ ಮನ್ನಾ ವಿಚಾರದಲ್ಲಿ ಮೂರು ದಿನಗಳೊಳಗೆ ಸಭೆ ಸೇರಿ ನಿರ್ಧಾರ ಕೈಗೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವಾಲಯ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ಗೆ (ಆರ್ಬಿಐ) ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.</p>.<p class="title">ಬಡ್ಡಿ ಪಾವತಿಯನ್ನು ನಿರ್ದಿಷ್ಟ ಅವಧಿಗೆ ಮುಂದೂಡಿದ್ದರೆ, ಆ ಅವಧಿಯ ಬಡ್ಡಿಯ ಮೇಲೆ ಬ್ಯಾಂಕುಗಳು ಬಡ್ಡಿ ಹೇರಬಾರದು ಎಂದು ಪೀಠವು ಸ್ಪಷ್ಟವಾಗಿ ಹೇಳಿದೆ.</p>.<p class="title">ಮುಂದೂಡಿಕೆಯ ಪೂರ್ಣ ಅವಧಿಯ ಬಡ್ಡಿ ಮನ್ನಾ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲು ಸೂಚಿಸಿಲ್ಲ. ಇದು ಬಡ್ಡಿಯ ಮೇಲೆ ಬ್ಯಾಂಕುಗಳು ವಿಧಿಸುವ ಬಡ್ಡಿಗಷ್ಟೇ ಸೀಮಿತ ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್.ಕೆ. ಕೌಲ್ ಮತ್ತು ಎಂ.ಆರ್. ಶಾ ಅವರ ಪೀಠವು ಸ್ಪಷ್ಟಪಡಿಸಿದೆ.</p>.<p>ಆರ್ಬಿಐ ಜತೆಗೆ ಸಮಾಲೋಚನೆ ನಡೆಸಿದ ಬಳಿಕ ಪ್ರಮಾಣಪತ್ರ ಸಲ್ಲಿಸುವಂತೆ ಕೇಂದ್ರಕ್ಕೆ ಪೀಠವು ಸೂಚಿಸಿದೆ.</p>.<p>ಕಂತು ಪಾವತಿಯ ಅವಧಿಯನ್ನು ಆರು ತಿಂಗಳ ಅವಧಿಗೆ ಮುಂದೂಡಲಾಗಿದೆ. ಈ ಅವಧಿಗೆ ಬಡ್ಡಿ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಎಸ್ಬಿಐ ಮತ್ತು ಭಾರತೀಯ ಬ್ಯಾಂಕುಗಳ ಸಂಘಟನೆಯು ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>ಮುಂದೂಡಿಕೆ ಅವಧಿಯ ಬಡ್ಡಿಯ ಮೊತ್ತವನ್ನು ಸಾಲ ಎಂದು ಪರಿಗಣಿಸಿ, 2021ರ ಮಾರ್ಚ್ 31ರ ಒಳಗೆ ಪಾವತಿಸುವ ಅವಕಾಶವನ್ನು ಬ್ಯಾಂಕುಗಳು ನೀಡಬಹುದು. ಆದರೆ, ಇದು ಆಯಾ ಬ್ಯಾಂಕುಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಆರ್ಬಿಐ, ಕೋರ್ಟ್ಗೆ ಈ ಹಿಂದೆಯೇ ಹೇಳಿತ್ತು.</p>.<p>ಮಾರ್ಚ್ 27, ಏಪ್ರಿಲ್ 17ರಂದು ಸುತ್ತೋಲೆ ಹೊರಡಿಸಿದ್ದ ಆರ್ಬಿಐ, ಸಾಲದ ಕಂತು ಪಾವತಿಯನ್ನು ಮೂರು ತಿಂಗಳು ಮುಂದೂಡಿತ್ತು. ಬಳಿಕ, ಅದನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>