ಶಬರಿಮಲೆ ತೀರ್ಪಿನ ಮರು ಪರಿಶೀಲನಾ ಅರ್ಜಿಯನ್ನು ನ.14ರಂದು ವಿಸ್ತೃತ ಪೀಠಕ್ಕೆ ಒಪ್ಪಿಸಿದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು, ‘ದರ್ಗಾ ಮತ್ತು ಮಸೀದಿಯೊಳಗೆ ಪ್ರವೇಶಿಸಲು ಮುಸ್ಲಿಂ ಮಹಿಳೆಯರಿಗೆ ಅನುಮತಿ ನೀಡುವುದು, ಬೇರೆ ಸಮುದಾಯದ ವ್ಯಕ್ತಿಯನ್ನು ವರಿಸಿದ ಪಾರ್ಸಿ ಮಹಿಳೆಗೆ ಪವಿತ್ರವಾದ ಅಗ್ನಿ ಇರುವ ‘ಅಗ್ಯಾರಿ’ ದೇವಸ್ಥಾನದೊಳಗೆ ಪ್ರವೇಶಕ್ಕೆ ಅನುಮತಿ ನೀಡುವುದು, ದಾವುದಿ ಬೊಹರಾ ಸಮುದಾಯದಲ್ಲಿ ಅಸ್ತಿತ್ವದಲ್ಲಿರುವ ಮಹಿಳೆಯರ ಜನನಾಂಗವನ್ನು ಕತ್ತರಿಸುವ ಸಂಪ್ರದಾಯಗಳ ಬಗ್ಗೆಯೂ ಸ್ಪಷ್ಟವಾದ ನಿರ್ಣಯಗಳನ್ನು ಕೈಗೊಳ್ಳಬೇಕಾಗಿದೆ’ ಎಂದು ಹೇಳಿತ್ತು.