ಬಿಸಿಸಿಐ ಹೇರಿದ್ದ ನಿಷೇಧ ತೆರವುಗೊಳಿಸಬೇಕೆಂದು ಮನವಿ ಮಾಡಿ ಶ್ರೀಶಾಂತ್ ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ. ಆದರೆ, ಕೇರಳ ಹೈಕೋರ್ಟ್ ಬಿಸಿಸಿಐ ನಿರ್ಧಾರವನ್ನೇ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ವನವಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ಮತ್ತು ಕೆ.ಎಂ. ಜೋಸೆಫ್ ಅವರನ್ನೊಳಗೊಂಡ ವಿಭಾಗೀಯ ಪೀಠ, ‘ಶ್ರೀಶಾಂತ್ ಅವರಿಗೆ ನೀಡಿದ್ದ ಶಿಕ್ಷೆಯ ಪ್ರಮಾಣದ ಬಗ್ಗೆ ಬಿಸಿಸಿಐ 3 ತಿಂಗಳೊಳಗೆ ಮರುಪರಿಶೀಲನೆ ಮಾಡಬೇಕು’ ಎಂದು ನಿರ್ದೇಶಿಸಿದೆ.
‘ಶ್ರೀಶಾಂತ್ ಅವರ ಮೇಲಿರುವ ಕ್ರಿಮಿನಲ್ ಮೊಕದ್ದಮೆಗಳ ಮೇಲೆ ಈ ತೀರ್ಪು ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ಪೀಠ ಸ್ಪಷ್ಟಪಡಿಸಿದೆ.
2015ರಲ್ಲಿ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ವಿಚಾರಣಾ ನ್ಯಾಯಾಲಯ,ಸಾಕ್ಷ್ಯಾಧಾರಗಳ ಕೊರತೆಯಿಂದಆರೋಪಿಗಳಾಗಿದ್ದ ಶ್ರೀಶಾಂತ್, ಚವ್ಹಾಣ್, ಚಾಂಡಿಲ ನಿರ್ದೋಷಿ ಎಂದು ತೀರ್ಪು ನೀಡಿತ್ತು. ದೆಹಲಿ ಪೊಲೀಸರು ಈ ತೀರ್ಪು ಪ್ರಶ್ನಿಸಿ ದೆಹಲಿ ಹೈಕೋರ್ಟ್ಗೆ ಮೇಲ್ವನವಿ ಸಲ್ಲಿಸಿದ್ದಾರೆ.