ಘಟಕದ ಪುನರಾರಂಭಕ್ಕೆ ಅನುಮತಿ ನೀಡಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಆದೇಶಕ್ಕೆ ತಡೆಯಾಜ್ಞೆ ವಿಧಿಸಬೇಕೆಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿತ್ತು. ನ್ಯಾಯಮೂರ್ತಿ ಆರ್.ಎಫ್.ನರಿಮನ್ ನೇತೃತ್ವದ ನ್ಯಾಯಪೀಠ, ರಾಜ್ಯ ಸರ್ಕಾರದ ಈ ಮನವಿ ಕುರಿತು ಪ್ರತಿಕ್ರಿಯೆ ನೀಡುವಂತೆ ವೇದಾಂತ ಕಂಪನಿಗೆ ಸೂಚಿಸಿದೆ.