ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲಮಿತಿಯಲ್ಲಿ ವಲಸಿಗರನ್ನು ಊರಿಗೆ ತಲುಪಿಸಿ: ಸುಪ್ರೀಂ ಕೋರ್ಟ್

ಉಚಿತ ಸಾರಿಗೆ ಸೌಲಭ್ಯ ನೀಡಿ
Last Updated 19 ಜೂನ್ 2020, 16:30 IST
ಅಕ್ಷರ ಗಾತ್ರ

ನವದೆಹಲಿ: ಲಾಕ್‌ಡೌನ್‌ನಿಂದಾಗಿ ದೇಶದ ವಿವಿಧೆಡೆ ಸಮಸ್ಯೆಗೆ ಸಿಲುಕಿರುವ ವಲಸೆ ಕಾರ್ಮಿಕರನ್ನು ನಿಗದಿತ ಸಮಯದಲ್ಲಿ ಅವರ ಊರುಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಎಲ್ಲ ವಲಸೆ ಕಾರ್ಮಿಕರನ್ನು 15 ದಿನಗಳಲ್ಲಿ ಮನೆಗೆ ತಲುಪಿಸಬೇಕು ಎಂದು ಆದೇಶಿಸಿ ಈ ಹಿಂದೆ ನೀಡಲಾದ ಕಾಲಮಿತಿ ಪಾಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್‌ ಕೌಲ್ ಮತ್ತು ಎಂ.ಆರ್. ಶಾ ಅವರಿದ್ದ ನ್ಯಾಯಪೀಠ ಹೇಳಿದೆ.

ವಲಸಿಗರನ್ನು ಸುರಕ್ಷಿತವಾಗಿ ತಲುಪಿಸುವಂತೆ ಸೂಚಿಸಲಾದ ತನ್ನ ಆದೇಶದ ಬಗ್ಗೆ ಸಾಕಷ್ಟು ಪ್ರಚಾರ ನೀಡಬೇಕು ಎಂದೂ ಪೀಠ ಇದೇ ವೇಳೆ ಮತ್ತೊಮ್ಮೆ ಸೂಚಿಸಿದೆ.

ಅಲ್ಲಲ್ಲಿ ಸಿಲುಕಿಕೊಂಡ ವಲಸೆ ಕಾರ್ಮಿಕರು ಸಮಸ್ಯೆ ಎದುರಿಸಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಕಾರ್ಮಿಕರು ಉಚಿತವಾಗಿ ಮನೆಗೆ ಹಿಂತಿರುಗಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಗಳಿಗೆ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT