<p><strong>ನವದೆಹಲಿ:</strong> ಲಾಕ್ಡೌನ್ನಿಂದಾಗಿ ದೇಶದ ವಿವಿಧೆಡೆ ಸಮಸ್ಯೆಗೆ ಸಿಲುಕಿರುವ ವಲಸೆ ಕಾರ್ಮಿಕರನ್ನು ನಿಗದಿತ ಸಮಯದಲ್ಲಿ ಅವರ ಊರುಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.</p>.<p>ಎಲ್ಲ ವಲಸೆ ಕಾರ್ಮಿಕರನ್ನು 15 ದಿನಗಳಲ್ಲಿ ಮನೆಗೆ ತಲುಪಿಸಬೇಕು ಎಂದು ಆದೇಶಿಸಿ ಈ ಹಿಂದೆ ನೀಡಲಾದ ಕಾಲಮಿತಿ ಪಾಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಎಂ.ಆರ್. ಶಾ ಅವರಿದ್ದ ನ್ಯಾಯಪೀಠ ಹೇಳಿದೆ.</p>.<p>ವಲಸಿಗರನ್ನು ಸುರಕ್ಷಿತವಾಗಿ ತಲುಪಿಸುವಂತೆ ಸೂಚಿಸಲಾದ ತನ್ನ ಆದೇಶದ ಬಗ್ಗೆ ಸಾಕಷ್ಟು ಪ್ರಚಾರ ನೀಡಬೇಕು ಎಂದೂ ಪೀಠ ಇದೇ ವೇಳೆ ಮತ್ತೊಮ್ಮೆ ಸೂಚಿಸಿದೆ.</p>.<p>ಅಲ್ಲಲ್ಲಿ ಸಿಲುಕಿಕೊಂಡ ವಲಸೆ ಕಾರ್ಮಿಕರು ಸಮಸ್ಯೆ ಎದುರಿಸಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಕಾರ್ಮಿಕರು ಉಚಿತವಾಗಿ ಮನೆಗೆ ಹಿಂತಿರುಗಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಗಳಿಗೆ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲಾಕ್ಡೌನ್ನಿಂದಾಗಿ ದೇಶದ ವಿವಿಧೆಡೆ ಸಮಸ್ಯೆಗೆ ಸಿಲುಕಿರುವ ವಲಸೆ ಕಾರ್ಮಿಕರನ್ನು ನಿಗದಿತ ಸಮಯದಲ್ಲಿ ಅವರ ಊರುಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.</p>.<p>ಎಲ್ಲ ವಲಸೆ ಕಾರ್ಮಿಕರನ್ನು 15 ದಿನಗಳಲ್ಲಿ ಮನೆಗೆ ತಲುಪಿಸಬೇಕು ಎಂದು ಆದೇಶಿಸಿ ಈ ಹಿಂದೆ ನೀಡಲಾದ ಕಾಲಮಿತಿ ಪಾಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಎಂ.ಆರ್. ಶಾ ಅವರಿದ್ದ ನ್ಯಾಯಪೀಠ ಹೇಳಿದೆ.</p>.<p>ವಲಸಿಗರನ್ನು ಸುರಕ್ಷಿತವಾಗಿ ತಲುಪಿಸುವಂತೆ ಸೂಚಿಸಲಾದ ತನ್ನ ಆದೇಶದ ಬಗ್ಗೆ ಸಾಕಷ್ಟು ಪ್ರಚಾರ ನೀಡಬೇಕು ಎಂದೂ ಪೀಠ ಇದೇ ವೇಳೆ ಮತ್ತೊಮ್ಮೆ ಸೂಚಿಸಿದೆ.</p>.<p>ಅಲ್ಲಲ್ಲಿ ಸಿಲುಕಿಕೊಂಡ ವಲಸೆ ಕಾರ್ಮಿಕರು ಸಮಸ್ಯೆ ಎದುರಿಸಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಕಾರ್ಮಿಕರು ಉಚಿತವಾಗಿ ಮನೆಗೆ ಹಿಂತಿರುಗಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಗಳಿಗೆ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>