ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಳಿ, ಮಳೆ: ₹ 35 ಲಕ್ಷ ಹಾನಿ

Last Updated 15 ಮೇ 2018, 3:09 IST
ಅಕ್ಷರ ಗಾತ್ರ

ಗೋಕಾಕ: ತಾಲ್ಲೂಕಿನ ಕೊಳವಿ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ತಡರಾತ್ರಿ ಬೀಸಿದ ಭಾರೀ ಗಾಳಿ ಮತ್ತು ಮಳೆಗೆ ಕೊಳವಿ ಗ್ರಾಮ ಹೊರವಲಯದಲ್ಲಿರುವ ಗೋಕಾಕ ಶುಗರ್‍ಸ್ ಕಾರ್ಖಾನೆಗೆ ಸೇರಿದ ಸಕ್ಕರೆ ಗೋದಾಮಿನ ಮೇಲ್ಛಾವಣಿ ಹಾರಿ ಹೋಗಿದ್ದರಿಂದ ಅಪಾರ ಹಾನಿ ಸಂಭವಿಸಿದೆ.

‘ಕಟ್ಟಡಕ್ಕೆ ಅಂದಾಜು ₹ 10 ಲಕ್ಷಕ್ಕೂ ಅಧಿಕ ಪ್ರಮಾಣದ ಹಾಗೂ ₹ 25 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಸಕ್ಕರೆ ತುಂಬಿದ ಚೀಲಗಳಿಗೆ ಹಾನಿಯಾಗಿದೆ’ ಎಂದು ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ಸಂಜೀವ ತೇರದಾಳ ತಿಳಿಸಿದ್ದಾರೆ.

ಸಕ್ಕರೆ ಕಾರ್ಖಾನೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮರಗಳು ಸಹ ನೆಲಕ್ಕುರುಳಿವೆ ಎಂದು ಮೂಲಗಳು ತಿಳಿಸಿವೆ. ‘ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಸಕ್ಕರೆ ಕಾರ್ಖಾನೆ ಗೋದಾಮಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಹಾನಿಯಾಗಿದೆ ಎಂದು ಮೇಲಾಧಿಕಾರಿಗಳಿಗೆ ವರದಿ ನೀಡಿದ್ದಾರೆ’ ಎಂದು ಕೊಳವಿ ಗ್ರಾಮ ಲೆಕ್ಕಾಧಿಕಾರಿ ಎಚ್.ಎಸ್.ಪಾಟೀಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT