‘ಜೈಲಿನಿಂದ ಬಿಡುಗಡೆಯಾದರೆ ಚಿದಂಬರಂ ಅವರು ಸಾಕ್ಷಿದಾರರ ಮೇಲೆ ಪ್ರಭಾವ ಬೀರುವ ಮತ್ತು ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಇದೆ’ ಎಂಬ ಜಾರಿ ನಿರ್ದೇಶನಾಲಯದ (ಇ.ಡಿ) ವಾದವನ್ನು ತಿರಸ್ಕರಿಸಿದ ನ್ಯಾಯಾಲಯವು, ‘ಆರೋಪಿಯು ರಾಜಕೀಯವಾಗಿ ಯಾವುದೇ ಅಧಿಕಾರವನ್ನು ಹೊಂದಿಲ್ಲ. ಸರ್ಕಾರದಲ್ಲಿ ಯಾವ ಹುದ್ದೆಯನ್ನೂ ನಿಭಾಯಿಸುತ್ತಿಲ್ಲ. ಆದ್ದರಿಂದ ಜಾರಿ ನಿರ್ದೇಶನಾಲಯದ ವಾದವನ್ನು ಒಪ್ಪಲು ಸಾಧ್ಯವಿಲ್ಲ’ ಎಂದಿದೆ.