ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಂಡ ಕಾರಣ ಅರ್ಜಿಯ ಉದ್ದೇಶ ಈಡೇರಿದೆ. ಹಾಗಾಗಿ ಅರ್ಜಿ ವಾಪಸ್ ಪಡೆಯುವುದಾಗಿ ಅರ್ಜಿದಾರರಾದ ಆರ್.ಶಂಕರ್ ಹಾಗೂ ಎಚ್.ನಾಗೇಶ್ ಪರ ಕಿರಿಯ ವಕೀಲೆ ದೀಕ್ಷಾ ರೈ ತಿಳಿಸಿದ್ದರಿಂದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಸಮ್ಮತಿ ಸೂಚಿಸಿದರು. ವಿಚಾರಣೆ ವೇಳೆ ಹಾಜರಿರದ ಹಿರಿಯ ವಕೀಲರಾದ ಮುಕುಲ್ ರೋಹಟ್ಗಿ, ಅಭಿಷೇಕ್ ಮನು ಸಿಂಘ್ವಿ ಹಾಗೂ ಕಪಿಲ್ ಸಿಬಲ್ ಅವರನ್ನು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.