ಇ.ಡಿ. ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಐಎನ್ಎಕ್ಸ್ ಮೀಡಿಯಾ ಪ್ರರಣಕ್ಕೆ ಸಂಬಂಧಿಸಿ 2017ರ ಮೇನಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಅವರನ್ನು ಆಗಸ್ಟ್ 21ರಂದು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ಜಾಮೀನು ನೀಡಿದೆ. ಆದರೆ, ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ದೊರೆತಿರುವುದರಿಂದ ಅವರು ಜೈಲಿನಲ್ಲೇ ಇರಬೇಕಾಗಿದೆ.