‘ಸಂಧಾನದ ಮೂಲಕ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ಏಕೆಂದರೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ತೀರ್ಪು ಬರಬೇಕಾದರೆ ತಡವಾಗುತ್ತದೆ. ಅಲ್ಲದೇ, ವ್ಯಾಜ್ಯಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದರಿಂದ ನ್ಯಾಯಾಲಯಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಮನಸ್ಸು ಮುರಿಯದೇ, ಸಂಬಂಧ ಉಳಿಸಿಕೊಳ್ಳಲು ಲೋಕ ಅದಾಲತ್ಗಳ ಪ್ರಯೋಜನ ಪಡೆದುಕೊಳ್ಳಬೇಕು. ಇದರಿಂದ ಹೆಚ್ಚಿನ ಹಣ ಖರ್ಚಾಗುವ ಪ್ರಮೇಯವೂ ಇರುವುದಿಲ್ಲ’ ಎಂದು ಹೇಳಿದರು.