‘ಹೈಕೋರ್ಟ್ ಈ ರೀತಿ ಸೂಚಿಸಿದ್ದರಲ್ಲಿ ತಪ್ಪೇನಿದೆ’ ಎಂದು ಬಿಬಿಎಂಪಿ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಪ್ರಶ್ನಿಸಿದ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರಿದ್ದ ಪೀಠ, ‘ಜವಾಬ್ದಾರಿಯುತ ಸ್ಥಳೀಯ ಸಂಸ್ಥೆಗೆ ಇದರಿಂದ ಏನಾದರೂ ತೊಂದರೆ ಇದೆಯೇ?, ಈ ಮೂಲಕ ನೀವು ಅಕ್ರಮ ಕಟ್ಟಡಗಳನ್ನು ಕ್ರಮಬದ್ಧಗೊಳಿಸಲು ಬಯಸಿದ್ದೀರಾ’ ಎಂದು ಕಿಡಿಕಾರಿತು.