‘ಜನರಿಗೆ ಪ್ರತಿಭಟನೆಯ ಹಕ್ಕಿದೆ. ಆದರೆ ಎಲ್ಲಿ ಪ್ರತಿಭಟನೆ ನಡೆಸಬೇಕು ಎನ್ನುವ ಪ್ರಶ್ನೆಯನ್ನು ಸೂಕ್ಷ್ಮವಾಗಿ ಗಮನಿಸಬೇಕು. ರಸ್ತೆಯಲ್ಲಿ ಸಂಚಾರ ನಿರ್ಬಂಧಿಸುವುದು ಸಮಸ್ಯೆ ಉಂಟುಮಾಡುತ್ತದೆ. ನಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಗತ್ಯ. ಆದರೆ ಅದಕ್ಕೆ ಒಂದು ಚೌಕಟ್ಟು ಇರಬೇಕು’ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ಹೇಳಿತ್ತು.