<p><strong>ನವದೆಹಲಿ</strong>: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ವಿನಯ್ ಕುಮಾರ್ ಶರ್ಮಾ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿದ್ದರು. ಈ ಅರ್ಜಿ ತಿರಸ್ಕೃತವಾಗಿರುವಬಗ್ಗೆ ಅವಲೋಕನನಡೆಸಬೇಕು ಎಂದು ವಿನಯ್ ಕುಮಾರ್ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನುಕೋರ್ಟ್ ಗುರುವಾರ ತಿರಸ್ಕರಿಸಿದೆ.</p>.<p>ಕ್ಷಮಾದಾನ ಅರ್ಜಿಯನ್ನುತಿರಸ್ಕರಿಸಿರುವಶಿಫಾರಸಿಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಗೃಹ ಸಚಿವರು ಸಹಿ ಹಾಕಿಲ್ಲ ಎಂದು ಶರ್ಮಾ ಅವರ ವಕೀಲರು ಸುಪ್ರೀಂಕೋರ್ಟ್ನಲ್ಲಿ ವಾದಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/nirbhaya-case-delhi-court-offers-lawyer-to-death-row-convict-victim%E0%B2%B8-mother-disappointed-704831.html" target="_blank">ನಿರ್ಭಯಾ ಪ್ರಕರಣ: ಅಪರಾಧಿ ಪವನ್ ಗುಪ್ತಾಗೆ ವಕೀಲರ ನೆರವು ನೀಡಲಿದೆ ಕೋರ್ಟ್</a></p>.<p>ಆದಾಗ್ಯೂ, ನ್ಯಾಯಮೂರ್ತಿ ಆರ್. ಬಾನುಮತಿ, ಅಶೋಕ್ ಭೂಷಣ್ ಮತ್ತು ಎ.ಎಸ್. ಬೋಪಣ್ಣ ಅವರ ನ್ಯಾಯಪೀಠವು ನಾವು ಕ್ಷಮಾದಾನ ಅರ್ಜಿ ತಿರಸ್ಕರಿಸಿರುವ ಶಿಫಾರಸು ಪತ್ರವನ್ನು ಪರಿಶೀಲಿಸಿದ್ದು ಅದರಲ್ಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಗೃಹ ಸಚಿವರ ಸಹಿ ಇದೆ ಎಂದು ಹೇಳಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/president-of-india-rejects-mercy-plea-of-convict-vinay-702200.html" target="_blank">ನಿರ್ಭಯಾ:ವಿನಯ್ ಕುಮಾರ್ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿಗಳು</a><br /><br />ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ವಿನಯ್ ಕುಮಾರ್ ಶರ್ಮಾ ಅವರ ಪರ ವಕೀಲ ಎ.ಪಿ.ಸಿಂಗ್ ಸುಪ್ರೀಂಕೋರ್ಟ್ ಮಂಗಳವಾರ ಅರ್ಜಿ ಸಲ್ಲಿಸಿದ್ದರು. ತರಾತುರಿಯಲ್ಲಿ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದು ದುರುದ್ದೇಶದಿಂದ ಕೂಡಿದೆಮತ್ತು ಇದು ಸಂವಿಧಾನದ ಆಶಯವನ್ನು ಉಲ್ಲಂಘಿಸಿದೆ ಎಂದು ಸಿಂಗ್ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ವಿನಯ್ ಕುಮಾರ್ ಶರ್ಮಾ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿದ್ದರು. ಈ ಅರ್ಜಿ ತಿರಸ್ಕೃತವಾಗಿರುವಬಗ್ಗೆ ಅವಲೋಕನನಡೆಸಬೇಕು ಎಂದು ವಿನಯ್ ಕುಮಾರ್ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನುಕೋರ್ಟ್ ಗುರುವಾರ ತಿರಸ್ಕರಿಸಿದೆ.</p>.<p>ಕ್ಷಮಾದಾನ ಅರ್ಜಿಯನ್ನುತಿರಸ್ಕರಿಸಿರುವಶಿಫಾರಸಿಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಗೃಹ ಸಚಿವರು ಸಹಿ ಹಾಕಿಲ್ಲ ಎಂದು ಶರ್ಮಾ ಅವರ ವಕೀಲರು ಸುಪ್ರೀಂಕೋರ್ಟ್ನಲ್ಲಿ ವಾದಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/nirbhaya-case-delhi-court-offers-lawyer-to-death-row-convict-victim%E0%B2%B8-mother-disappointed-704831.html" target="_blank">ನಿರ್ಭಯಾ ಪ್ರಕರಣ: ಅಪರಾಧಿ ಪವನ್ ಗುಪ್ತಾಗೆ ವಕೀಲರ ನೆರವು ನೀಡಲಿದೆ ಕೋರ್ಟ್</a></p>.<p>ಆದಾಗ್ಯೂ, ನ್ಯಾಯಮೂರ್ತಿ ಆರ್. ಬಾನುಮತಿ, ಅಶೋಕ್ ಭೂಷಣ್ ಮತ್ತು ಎ.ಎಸ್. ಬೋಪಣ್ಣ ಅವರ ನ್ಯಾಯಪೀಠವು ನಾವು ಕ್ಷಮಾದಾನ ಅರ್ಜಿ ತಿರಸ್ಕರಿಸಿರುವ ಶಿಫಾರಸು ಪತ್ರವನ್ನು ಪರಿಶೀಲಿಸಿದ್ದು ಅದರಲ್ಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಗೃಹ ಸಚಿವರ ಸಹಿ ಇದೆ ಎಂದು ಹೇಳಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/president-of-india-rejects-mercy-plea-of-convict-vinay-702200.html" target="_blank">ನಿರ್ಭಯಾ:ವಿನಯ್ ಕುಮಾರ್ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿಗಳು</a><br /><br />ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ವಿನಯ್ ಕುಮಾರ್ ಶರ್ಮಾ ಅವರ ಪರ ವಕೀಲ ಎ.ಪಿ.ಸಿಂಗ್ ಸುಪ್ರೀಂಕೋರ್ಟ್ ಮಂಗಳವಾರ ಅರ್ಜಿ ಸಲ್ಲಿಸಿದ್ದರು. ತರಾತುರಿಯಲ್ಲಿ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದು ದುರುದ್ದೇಶದಿಂದ ಕೂಡಿದೆಮತ್ತು ಇದು ಸಂವಿಧಾನದ ಆಶಯವನ್ನು ಉಲ್ಲಂಘಿಸಿದೆ ಎಂದು ಸಿಂಗ್ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>