ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಗಿನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರು: ನಿರಂಜಾನಾನಂದ ಪುರಿ ಸ್ವಾಮೀಜಿ– ರಾಹುಲ್‌ ಗಾಂಧಿ ಭೇಟಿ, ಅಮಿತ್‌ ಶಾಗೆ ಸಿಗದ ಸ್ವಾಮೀಜಿ

Last Updated 3 ಏಪ್ರಿಲ್ 2018, 13:56 IST
ಅಕ್ಷರ ಗಾತ್ರ

ಕಾಗಿನೆಲೆ: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಏಕಕಾಲದಲ್ಲಿ ಮಂಗಳವಾರ ಕಾಗಿನೆಲೆ ಭೇಟಿ ನೀಡಿದರು.

ಕಾಗಿನೆಲೆ ಮೂಲ ಪೀಠದಿಂದ ಬೆಳ್ಳೊಡಿ ಶಾಖಾ ಮಠಕ್ಕೆ ಆಗಮಿಸಿದ್ದ ಕಾಗಿನೆಲೆ ಪೀಠದ ನಿರಂಜಾನಾನಂದ ಪುರಿ ಸ್ವಾಮೀಜಿ ಅವರನ್ನು ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ರಾಹುಲ್‌ ಗಾಂಧಿ ಭೇಟಿಯಾದರು.

ಇದೇ ವೇಳೆ ಹಾವೇರಿಯ ಕಾಗಿನೆಲೆ ಮೂಲ ಪೀಠಕ್ಕೆ ಅಮಿತ್‌ ಶಾ ಭೇಟಿ ನೀಡಿದರು. ಆದರೆ, ನಿರಂಜಾನಾನಂದ ಪುರಿ ಸ್ವಾಮೀಜಿ ಅವರು ಶಾಖಾ ಮಠದಲ್ಲಿ ರಾಹುಲ್‌ ಅವರ ಭೇಟಿಯಲ್ಲಿ ಇದ್ದ ಕಾರಣ ಅಮಿತ್‌ ಶಾ ಭೇಟಿ ಸಾಧ್ಯವಾಗಲಿಲ್ಲ. ‌‌

ಸಿಎಂ ಸಿದ್ದರಾಮಯ್ಯ,ರಾಹುಲ್ ಗಾಂಧಿ ಬೊಳ್ಳೊಡಿಗೆ ಆಗಮಿಸುತ್ತಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸ್ವಾಮೀಜಿ ಶಾಖಾ ಪೀಠದಲ್ಲೇ ಉಳಿದುಕೊಂಡಿದ್ದರು.

ಕಾಗಿನೆಲೆ ಮೂಲ ಪೀಠದಲ್ಲಿ ತಿಂಥಣಿ ಮಠದ ಸಿದ್ಧರಾಮ ಸ್ವಾಮೀಜಿ, ಹೊಸದುರ್ಗದ ಈಶ್ವರಾನಂದಪುರಿ ಸ್ವಾಮೀಜಿ, ಕಾಗಿನೆಲೆ ಕಿರಿಯ ಸ್ವಾಮೀಜಿ ಅಮೋಘಾನಂದಪುರಿ ಸ್ವಾಮೀಜಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT