ಕೋಲ್ಕತ್ತ: ‘ಜೈ ಶ್ರೀರಾಮ್’ ಎಂದು ಬರೆದ 10ಲಕ್ಷ ಅಂಚೆ ಪತ್ರಗಳನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಲಾಗುವುದು ಎಂದು ಬಿಜೆಪಿ ಸಂಸದ ಅರ್ಜುನ್ ಸಿಂಗ್ ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ಮಾಜಿ ಶಾಸಕರಾಗಿರುವ ಅರ್ಜುನ್ ಅವರು ಸಾರ್ವತ್ರಿಕ ಚುನಾವಣೆಗೆ ಮೊದಲು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಟಿಎಂಸಿ ಸಭೆ ನಡೆಯುತ್ತಿದ್ದ ಸ್ಥಳದಲ್ಲಿ ‘ಜೈಶ್ರೀರಾಮ್’ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಅಂಚೆ ಪತ್ರ ಕಳುಹಿಸಲಾಗುತ್ತಿದೆ ಎಂದು ಅರ್ಜುನ್ ಹೇಳಿದ್ದಾರೆ.