ನವದೆಹಲಿ: ಪಾಕಿಸ್ತಾನ ಉಗ್ರ ಶಿಬಿರಗಳ ಮೇಲೆ ಭಾರತೀಯ ವಾಯು ಪಡೆ ವೈಮಾನಿಕ ದಾಳಿ ನಡೆಸಿದ ವಿಚಾರಸಂಬಂಧಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಂಗಳವಾರ ಸಂಜೆ 5 ಗಂಟೆಗೆ ಸರ್ವ ಪಕ್ಷಗಳಸಭೆ ಕರೆದಿದ್ದಾರೆ.
ಬಲಾಕೋಟ್ನಲ್ಲಿ ಜೈಷೆ ಉಗ್ರ ಸಂಘಟನೆಯ ಶಿಬಿರದ ಮೇಲೆ ನಡೆದ ವೈಮಾನಿಕ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಅವರಿಗೆ ವಿವರಣೆ ನೀಡಿದ್ದಾರೆ.