ಈ ಕುರಿತು ತನಿಖೆ ನಡೆಸಲಾ ಗುವುದು. ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಲಾಗುವುದು. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಔಷಧಿ ಪೂರೈಸಿದ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ ತಿಳಿಸಿದ್ದಾರೆ. ಕೃಷ್ಣಪ್ಪ ವೈಯಕ್ತಿಕವಾಗಿ ತಲಾ ₹ 50 ಸಾವಿರ, ಜೆಡಿಎಸ್ ಪಕ್ಷದಿಂದ ತಲಾ ₹50 ಸಾವಿರ, ಜೆಡಿಎಸ್ ಮುಖಂಡ ಡಾ.ಎಚ್.ಕೃಷ್ಣ ವೈಯಕ್ತಿಕವಾಗಿ ತಲಾ ₹ 50 ಸಾವಿರ, ಮುಡಾ ಅಧ್ಯಕ್ಷ ಮುನಾವರ್ ಖಾನ್ ತಲಾ ₹ 50 ಸಾವಿರ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.