‘ಕಳೆದ ಡಿಸೆಂಬರ್ ತಿಂಗಳಲ್ಲಿ ದೋಣಿ ಕಣ್ಮರೆಯಾಗಿದ್ದ ಸ್ಥಳದ ಬಳಿಯೇ ಸಮುದ್ರದ ಮೇಲೆ ದೋಣಿಯಲ್ಲಿದ್ದ ಡಬ್ಬಿಯಂತಹ ವಸ್ತುವೊಂದು ಪತ್ತೆಯಾಗಿದ್ದಾಗಿ ನೌಕಾಪಡೆ ಸಿಬ್ಬಂದಿ ಬಹಳ ಮುಂಚೆಯೇ ತಿಳಿಸಿದ್ದರು. ಆದರೂ ದೋಣಿಯ ಪತ್ತೆಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳದಿರುವುದು ಏಕೆ?’ ಎಂದು ರಕ್ಷಣಾ ಸಚಿವಾಲಯವನ್ನು ಪ್ರಶ್ನಿಸಿರುವ ಆಯೋಗ, ಕಾಣೆಯಾದ ಮೀನುಗಾರರ ಪತ್ತೆಗಾಗಿ ಮುಂದುವರಿಸಿರುವ ಕಾರ್ಯಾಚರಣೆ ವಿವರ ನೀಡುವಂತೆಯೂ ನಿರ್ದೇಶನ ನೀಡಿದೆ.