ಕೊಲ್ಕತ್ತಾ: ಸ್ವಾಮಿ ವಿವೇಕಾನಂದರ 157ನೇ ಜನ್ಮದಿನೋತ್ಸವ ಪ್ರಯುಕ್ತಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೌರಾದಲ್ಲಿ ರಾಮಕೃಷ್ಣ ಮಿಷನ್ ಪ್ರಧಾನ ಕಚೇರಿ ಇರುವ ಬೇಲೂರು ಮಠಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರ ಚಿತ್ರಪಟಕ್ಕೆ ನಮಿಸಿದರು. ಕೆಲ ಸಮಯ ಕಣ್ಮುಚ್ಚಿ ಧ್ಯಾನ ಮಾಡಿದರು.
‘ಸ್ವಾಮಿ ವಿವೇಕಾನಂದರು ಭಾರತೀಯರಹೃದಯ ಮತ್ತು ಮನಸ್ಸಿನಲ್ಲಿ ಜೀವಂತವಿದ್ದಾರೆ. ದೇಶದ ಯುವಜನತೆ ಇಂದಿಗೂ ವಿವೇಕಾನಂದರನ್ನು ಆದರ್ಶ ಎಂದೇ ಭಾವಿಸುತ್ತೆ. ವಿವೇಕಾನಂದರ ಜಯಂತಿ ಮತ್ತು ರಾಷ್ಟ್ರೀಯ ಯುವದಿನವಾದ ಇಂದು ನಾನು ಬೇಲೂರು ಮಠದಲ್ಲಿದ್ದೇನೆ.ವಿವೇಕಾನಂದರು ಧ್ಯಾನ ಮಾಡಿದ್ದ ಕೊಠಡಿ ನೋಡಿ ಧನ್ಯನಾದೆ’ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
The thoughts of Sri Ramakrishna emphasise on furthering harmony and compassion. He believed that a great way to serve God is to serve people, especially the poor and downtrodden.
— Narendra Modi (@narendramodi) January 12, 2020
At the Belur Math this morning, I paid tributes to Sri Ramakrishna. pic.twitter.com/Es9vPSH80q
ಮಠದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಅವರು,‘ಹೌರಾದಲ್ಲಿರುವ ಬೇಲೂರು ಮಠಕ್ಕೆ ಭೇಟಿ ನೀಡುವುದು ತೀರ್ಥಯಾತ್ರೆಗೆ ಸಮ. ಸ್ವಾಮಿ ವಿವೇಕಾನಂದರ ಜೀವನ ಮತ್ತು ಆದರ್ಶಗಳು ನನಗೆ ಸದಾ ಮಾರ್ಗದರ್ಶನ ನೀಡುತ್ತವೆ’ ಎಂದು ಹೇಳಿದರು.
ರಾಮಕೃಷ್ಣ ಮಿಷನ್ನ ಮುಖ್ಯ ಕಚೇರಿ ಇರುವ ಬೇಲೂರು ಮಠದಲ್ಲಿ ರಾತ್ರಿ ಕಳೆದ ಮೊದಲ ಪ್ರಧಾನಿ ಎಂಬ ಶ್ರೇಯವೂ ಅವರದ್ದಾಯಿತು. ‘ಬೇಲೂರು ಮಠದಲ್ಲಿ ಕಳೆದ ವಿಶಿಷ್ಟ ಗಳಿಗೆಗಳು’ ಎನ್ನುವ ಒಕ್ಕಣೆಯೊಂದಿಗೆಸಂತರನ್ನು ಭೇಟಿಯಾದ ಚಿತ್ರಗಳನ್ನೂ ಮೋದಿ ಟ್ವೀಟ್ ಮಾಡಿದ್ದಾರೆ.
Tributes to Swami Vivekananda on his Jayanti. Live from Belur Math. https://t.co/yE8lOghIIQ
— Narendra Modi (@narendramodi) January 12, 2020
Swami Vivekananda lives in the hearts and minds of crores of Indians, especially the dynamic youth of India for whom he has a grand vision.
— Narendra Modi (@narendramodi) January 12, 2020
Today, on Vivekananda Jayanti and National Youth Day I am at the Belur Math, including the room where Swami Ji meditated. pic.twitter.com/UeWQkUk94C
Special moments from the Belur Math. 🙏🏼 pic.twitter.com/XcgQ6gAt4A
— Narendra Modi (@narendramodi) January 11, 2020
ಯಾರ ಪೌರತ್ವವನ್ನೂ ನಾವು ಕಿತ್ತುಕೊಂಡಿಲ್ಲ: ನರೇಂದ್ರ ಮೋದಿ
‘ಪಾಕಿಸ್ತಾನದಲ್ಲಿ ತೊಂದರೆ ಅನುಭವಿಸಿದವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿದ್ದೇವೆ. ಯಾರ ಪೌರತ್ವಕ್ಕೂ ಧಕ್ಕೆ ತರುವ ಉದ್ದೇಶ ಕಾಯ್ದೆಗೆ ಇಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಬೇಲೂರುಮಠದಲ್ಲಿ (ರಾಮಕೃಷ್ಣ ಮಿಷನ್) ಭಾನುವಾರ ಭಾಷಣ ಮಾಡಿದ ಅವರು, ‘ಪೌರತ್ವ ಕಾಯ್ದೆ ವಿಚಾರದಲ್ಲಿ ಹಲವು ಯುವಜನರನ್ನು ದಾರಿ ತಪ್ಪಿಸಲಾಗಿದೆ. ಸಿಎಎ ಎಂದರೇನು? ಅದನ್ನು ಜಾರಿಗೆ ತರುವ ಅಗತ್ಯ ಏನಿತ್ತು ಎನ್ನುವುದರ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸಬೇಕಾದ್ದು ನಮ್ಮ ಕರ್ತವ್ಯ’ ಎಂದು ಅಭಿಪ್ರಾಯಪಟ್ಟರು.
‘ಯಾರಿಗೋ ಪೌರತ್ವ ನೀಡಬೇಕು ಎಂದು ರಾತ್ರೋರಾತ್ರಿ ಯಾವುದೇ ಕಾನೂನು ಜಾರಿ ಮಾಡಿಲ್ಲ. ಸಿಎಎ ಪೌರತ್ವ ಕೊಡುವ ಕಾಯ್ದೆಯೇ ಹೊರತು, ಪೌರತ್ವ ರದ್ದು ಮಾಡುವ ಕಾಯ್ದೆಯಲ್ಲ. ಪಾಕಿಸ್ತಾನದಿಂದ ನೋವು ಅನುಭವಿಸಿ ಭಾರತಕ್ಕೆ ಬಂದವರನ್ನು ಮತ್ತೆ ಅಲ್ಲಿಗೆ ವಾಪಸ್ ಕಳಿಸಲು ಸಾಧ್ಯವೇ? ಇದು ಒಳ್ಳೇ ಕೆಲಸ ಹೌದೋ ಅಲ್ಲವೋ’ ಎಂದು ಪ್ರಧಾನಿ ಪ್ರಶ್ನಿಸಿದರು.
‘ಭಾರತ ಸರ್ಕಾರ ಪೌರತ್ವ ಕಾಯ್ದೆ ಜಾರಿ ಮಾಡಿದ ಕಾರಣದಿಂದ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಜಗತ್ತು ಮಾತನಾಡುವಂತಾಯಿತು’ ಎಂದು ನುಡಿದರು.
ತಮ್ಮ ಭಾಷಣದಲ್ಲಿ ಪ್ರಧಾನಿ ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನ ದೇಶಗಳ ಹೆಸರು ಪ್ರಸ್ತಾಪಿಸಲಿಲ್ಲ. ದೇಶದಾದ್ಯಂತ ಸಿಎಎ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಪ್ರತಿಪಕ್ಷಗಳೇ ಕಾರಣ ಎಂದು ಹರಿಹಾಯ್ದರು.
ಇದನ್ನೂ ಓದಿ...
ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.#MamataBanerjee #NarendraModi#NationalRegisterOfCitizens #CitizenshipAmendmentActhttps://t.co/YUpvmrM3eY
— ಪ್ರಜಾವಾಣಿ|Prajavani (@prajavani) January 11, 2020
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.