‘ಆಸ್ತಿಯಲ್ಲಿ ಅಣ್ಣನಿಗೆ (ನನಗೆ) ಪಾಲು ಕೊಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ತಂದೆ ಎಸ್. ಬಂಗಾರಪ್ಪ ಅವರನ್ನು ಬ್ಲ್ಯಾಕ್ಮೇಲ್ ಮಾಡಿ, ರಾತ್ರಿ ಸಮಯದಲ್ಲಿ ಮನೆಯಿಂದ ಕರೆದುಕೊಂಡು ಹೋಗಿದ್ದು ಇದೇ ಮಧು ಬಂಗಾರಪ್ಪ. ಈ ವಿಷಯ ಕುಟುಂಬದ ಎಲ್ಲರಿಗೂ ಗೊತ್ತಿದೆ. ನಮ್ಮ ಕುಟುಂಬದ ಮರ್ಯಾದೆ ಕಳೆಯಬಾರದು ಎನ್ನುವ ಒಂದೇ ಕಾರಣಕ್ಕೆ ಸಹಿಸಿಕೊಂಡಿದ್ದೆ. ಈಗ ಚುನಾವಣೆಯಲ್ಲಿ ಗೆಲುವು ಸಾಧಿಸಲು ನನ್ನನ್ನು ಸ್ವಾರ್ಥಿ ಎಂದು ಬಿಂಬಿಸಲಾಗುತ್ತಿದೆ. ಮತ್ತೆ ನನ್ನ ವಿರುದ್ಧ ಅದೇ ಆರೋಪ ಮಾಡುತ್ತಿದ್ದಾರೆ. ಇನ್ನು ಸಹಿಸಲು ಸಾಧ್ಯವಿಲ್ಲ. ಎಲ್ಲ ವಿಷಯಗಳನ್ನೂ ಸಾಕ್ಷಿ ಸಮೇತ ಮಾಧ್ಯಮದ ಮುಂದೆ ಬಹಿರಂಗಪಡಿಸುತ್ತೇನೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.