ಇದೇ ತಿಂಗಳ 5ರಂದು ಕೇಂದ್ರ ಸರ್ಕಾರವು ಜಮ್ಮು–ಕಾಶ್ಮೀರ ವಿಶೇಷಾಧಿಕಾರ ರದ್ದು ನಿರ್ಧಾರ ಪ್ರಕಟಿಸಿತ್ತು. ಜತೆಗೆ ರಾಜ್ಯ ವಿಂಗಡಣೆ ವಿಧೇಯಕವನ್ನು ಸಂಸತ್ನಲ್ಲಿ ಮಂಡಿಸಿತ್ತು. ಇದಕ್ಕೆ ಪೂರ್ವಭಾವಿಯಾಗಿ ಮತ್ತು ಭದ್ರತಾ ಕ್ರಮವಾಗಿ 4ರಿಂದ ಜಮ್ಮು–ಕಾಶ್ಮೀರದಾದ್ಯಂತ ಅಂತರ್ಜಾಲ, ದೂರವಾಣಿ ಸೇರಿದಂತೆ ಎಲ್ಲ ಸಂವಹನ ಸೇವೆ ಸ್ಥಗಿತಗೊಳಿಸಲಾಗಿತ್ತು. ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಹಾಗೂ ಫಾರೂಕ್ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿರಿಸಲಾಗಿತ್ತು.